ವಿ.ವಿ.ಪುರಂ ಪೊಲೀಸ್ ಠಾಣೆ 
ರಾಜ್ಯ

ರಾಜ್ಯದಲ್ಲಿ ಕೊರೋನಾಗೆ ಮೊದಲ ಪೊಲೀಸ್ ಸಿಬ್ಬಂದಿ ಬಲಿ! ವಿವಿ ಪುರಂ ಎಎಸ್‌ಐ ಸಾವು, ಠಾಣೆ ಸೀಲ್ ಡೌನ್

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆ ಎಎಸ್‌ಐ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ. 

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆ ಎಎಸ್‌ಐ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ. 

ಮೃತರು ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್ ಐ ಎಂದು ತಿಳಿದುಬಂದಿದೆ.

15 ದಿನಗಳಲ್ಲಿ ನಿವೃತ್ತರಾಗಲಿದ್ದ ಅವರು, ಥಣಿಸಂದ್ರದ ಮನೆಯಲ್ಲಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ತಪಾಸಣೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಅದೇ ಠಾಣೆಯ ಮತ್ತೊಬ್ಬ ಎಎಸ್ಐಗೂ ಸೋಂಕು ತಗುಲಿದೆ. ವಿಷಯ ತಿಳಿದ ತಕ್ಷಣ ಪೊಲೀಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಇಡೀ ಠಾಣೆಯನ್ನು ಸೀಲ್ ಡೌನ್‌ ಮಾಡಿ ಸ್ಯಾನಿಟೈಸರ್ ಮಾಡಲಾಗುತ್ತಿದೆ.ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಮೃತರ ಅಂತ್ಯಸಂಸ್ಕಾರವನ್ನು ಸರ್ಕಾರದ ಸುತ್ತೋಲೆಯಂತೆ ನಡೆಸಲು ಸಿದ್ಧತೆ ನಡೆಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT