ವಿ.ವಿ.ಪುರಂ ಪೊಲೀಸ್ ಠಾಣೆ 
ರಾಜ್ಯ

ರಾಜ್ಯದಲ್ಲಿ ಕೊರೋನಾಗೆ ಮೊದಲ ಪೊಲೀಸ್ ಸಿಬ್ಬಂದಿ ಬಲಿ! ವಿವಿ ಪುರಂ ಎಎಸ್‌ಐ ಸಾವು, ಠಾಣೆ ಸೀಲ್ ಡೌನ್

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆ ಎಎಸ್‌ಐ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ. 

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆ ಎಎಸ್‌ಐ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ. 

ಮೃತರು ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್ ಐ ಎಂದು ತಿಳಿದುಬಂದಿದೆ.

15 ದಿನಗಳಲ್ಲಿ ನಿವೃತ್ತರಾಗಲಿದ್ದ ಅವರು, ಥಣಿಸಂದ್ರದ ಮನೆಯಲ್ಲಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ತಪಾಸಣೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಅದೇ ಠಾಣೆಯ ಮತ್ತೊಬ್ಬ ಎಎಸ್ಐಗೂ ಸೋಂಕು ತಗುಲಿದೆ. ವಿಷಯ ತಿಳಿದ ತಕ್ಷಣ ಪೊಲೀಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಇಡೀ ಠಾಣೆಯನ್ನು ಸೀಲ್ ಡೌನ್‌ ಮಾಡಿ ಸ್ಯಾನಿಟೈಸರ್ ಮಾಡಲಾಗುತ್ತಿದೆ.ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಮೃತರ ಅಂತ್ಯಸಂಸ್ಕಾರವನ್ನು ಸರ್ಕಾರದ ಸುತ್ತೋಲೆಯಂತೆ ನಡೆಸಲು ಸಿದ್ಧತೆ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT