ರವಿ ಪೂಜಾರಿ 
ರಾಜ್ಯ

ವಕೀಲ ನೌಶಾದ್ ಹತ್ಯೆ ಪ್ರಕರಣ: ಭೂಗತ ಪಾತಕಿ ರವಿ ಪೂಜಾರಿ 10 ದಿನ ಸಿಸಿಬಿ ವಶಕ್ಕೆ

ನ್ಯಾಯವಾದಿ ನೌಶಾದ್ ಕಾಶಿಂಜಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ, ಭೂಗತ ಪಾತಕಿ ರವಿ ಪೂಜಾರಿಯನ್ನು 10 ದಿನಗಳ ಕಾಲ ಬೆಂಗಳೂರು ನಗರ ಸಿಸಿಬಿ ವಶಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು: ನ್ಯಾಯವಾದಿ ನೌಶಾದ್ ಕಾಶಿಂಜಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ, ಭೂಗತ ಪಾತಕಿ ರವಿ ಪೂಜಾರಿಯನ್ನು 10 ದಿನಗಳ ಕಾಲ ಬೆಂಗಳೂರು ನಗರ ಸಿಸಿಬಿ ವಶಕ್ಕೆ ಒಪ್ಪಿಸಲಾಗಿದೆ.

2004ರ ಏ.9ರಂದು ಮಂಗಳೂರಿನ ಪಳ್ನೀರ್‌ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿಯೇ ನೌಶಾದ್‌ ಅವರನ್ನು ಹತ್ತಿರದಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಭೂಗತ ದೊರೆ ದಾವೂದ್‌ ಇಬ್ರಾಹಿಂ ಸಹಚರ ರಶೀದ್‌ ಮಲಬಾರಿ ಪರವಾಗಿ ನೌಶಾದ್‌ ನ್ಯಾಯಾಲಯದಲ್ಲಿ ಹಾಜರಾಗಿ ವಾದ ಮಂಡಿಸಿದ್ದರು.ಇದರಿಂದ ಆಕ್ರೋಶಗೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿ, ತನ್ನ ಸಹಚರರ ಮೂಲಕ ವಕೀಲ ನೌಶಾದ್ ಅವರನ್ನು ಹತ್ಯೆ ಮಾಡಿಸಿದ್ದ. 

ಇದನ್ನ ಮಂಗಳೂರಿನ ಪೊಲೀಸರೇ ತನಿಖೆ ನಡೆಸುತ್ತಿದ್ದರು. ಆದರೆ ಇದೀಗ ಡಿಜಿ& ಐಜಿಪಿ ಪ್ರವೀಣ್ ಸೂದ್ ಈ ಕೇಸನ್ನ ತನಿಖೆ ನಡೆಸುವಂತೆ ಸಿಸಿಬಿಗೆ ಸೂಚನೆ ನೀಡಿದೆ. ಈ ಹಿನ್ನೆಲೆ ಮಂಗಳೂರಿನಿಂದ ಸಿಸಿಬಿಗೆ ಈ ಕೇಸ್‌ ವರ್ಗಾವಣೆಯಾಗಿದೆ. ವಿಚಾರಣೆಗಾಗಿ ಸಿಸಿಬಿ 10 ದಿನ ರವಿ ಪೂಜಾರಿಯನ್ನ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ಹಲವು ವರ್ಷಗಳ ಹಿಂದೆ ಮಂಗಳೂರಿನ ವಕೀಲರೊಬ್ಬರನ್ನ ಹಣದ ವಿಚಾರಕ್ಕೆ ರವಿ ಪೂಜಾರಿ ಕೊಲೆ ಮಾಡಿಸಿದ ಅನ್ನುವ ಆರೋಪವಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT