ಪೋಸ್ಟ್‌ಮ್ಯಾನ್‌ ಮೇಲೆ ಯುವಕನಿಂದ ಹಲ್ಲೆ 
ರಾಜ್ಯ

ಮಂಗಳೂರು: ಪೋಸ್ಟ್‌ಮ್ಯಾನ್‌ ಮೇಲೆ ಯುವಕನಿಂದ ಹಲ್ಲೆ, ದೂರು ದಾಖಲು

ಯುವಕನೊಬ್ಬ ಪೋಸ್ಟ್‌ಮ್ಯಾನ್‌ನನ್ನು ಕಬ್ಬಿಣದ ರಾಡಿನಿಂದ ಹೊಡೆದು ಹಲ್ಲೆ ಮಾಡಿರುವುದಲ್ಲದೆ ಪೋಸ್ಟ್‌ಮ್ಯಾನ್‌ನ ಬೈಕ್ ಅನ್ನು ಹಾನಿಗೊಳಿಸಿ ಅವರಲ್ಲಿದ್ದ ಲೆಟರ್ ಗಳನ್ನು ಸಹ ದಿಕ್ಕು ಪಾಲಾಗಿ ಎಸೆದಿರುವ ಘಟನೆ ಮಂಗಳೂರು ನಗರದ ಮಠದಕಾನುವಿನಲ್ಲಿ ನಡೆದಿದೆ.

ಮಂಗಳೂರು: ಯುವಕನೊಬ್ಬ ಪೋಸ್ಟ್‌ಮ್ಯಾನ್‌ನನ್ನು ಕಬ್ಬಿಣದ ರಾಡಿನಿಂದ ಹೊಡೆದು ಹಲ್ಲೆ ಮಾಡಿರುವುದಲ್ಲದೆ ಪೋಸ್ಟ್‌ಮ್ಯಾನ್‌ನ ಬೈಕ್ ಅನ್ನು ಹಾನಿಗೊಳಿಸಿ ಅವರಲ್ಲಿದ್ದ ಲೆಟರ್ ಗಳನ್ನು ಸಹ ದಿಕ್ಕು ಪಾಲಾಗಿ ಎಸೆದಿರುವ ಘಟನೆ ಮಂಗಳೂರು ನಗರದ ಮಠದಕಾನುವಿನಲ್ಲಿ ನಡೆದಿದೆ.

ಸೋಮವಾರ ನಡೆದಿರುವ ಈ ಘಟನೆ ತಡವಾಗಿ ಬೆಳಕು ಕಂಡಿದ್ದು ನಗರದ ಅಶೋಕ್‌ನಗರ ಅಂಚೆ ಕಚೇರಿಯ ಪೋಸ್ಟ್‌ಮ್ಯಾನ್ ಕೋಟೇಕಾರು ನಿವಾಸಿ  ದಿನೇಶ್ (49), ಹಲ್ಲೆಗೊಳಗಾದ ವ್ಯಕ್ತಿ. ಇವರು ಮನೀಶ್ ಎಂಬ ಯುವಕನಿಂದ ಹಲ್ಲೆಗೊಳಗಾಗಿದ್ದರು.

ಅಶೋಕ್‌ನಗರ ಅಂಚೆ ಕಚೇರಿಯಲ್ಲಿ 19 ವರ್ಷದಿಂದ ಪೋಸ್ಟ್‌ಮ್ಯಾನ್ ಆಗಿ ಕೆಲಸ ಮಾಡುತ್ತಿರುವ ದಿನೇಶ್ ಎಂದಿನಂತೆ ತಮ್ಮ  ವ್ಯಾಪ್ತಿಯಲ್ಲಿನ ಪ್ರದೇಶಕ್ಕೆ ಬಂದ ಪತ್ರಗಳ ರವಾನೆಗಾಗಿ ತೆರಳಿದ್ದಾರೆ. ಆ ವೇಳೆ ಮನೀಶ್ ಗೆ ಬಂದಿದ್ದ ಪತ್ರವನ್ನು ಆತನಿಗೆ ತಲುಪಿಸಲು ಹೋದಾಗ ಮನೀಶ್ ಅವಾಚ್ಯ ಶಬ್ದಗಳನ್ನು ಬಳಸಿ ದಿನೇಶ್ ಅವರನ್ನು ನಿಂದಿಸಿದ್ದಾನೆ. ಮಾತ್ರವಲ್ಲದೆ ಇದ್ದಕ್ಕಿದ್ದಂತೆ ಕಬ್ಬಿಣದ ರಾಡಿನಿಂದ ಅವರಿಗೆ ಹೊಡೆದಿದ್ದಾನೆ. ದಿನೇಶ್ ಹೊಡೆತದಿಂದ ತಪ್ಪಿಸಿಕೊಂಡು ಓಡಿದಾಗ ಮನೀಶ್ ಅವರಿಗೆ ಸೇರಿದ್ದ ಬೈಕಿಗೆ ಹಾನಿ ಮಾಡಿದ್ದಾನೆ. ಬೈಕನ್ನು ಜಖಂ ಗೊಳಿಸಿದ್ದಲ್ಲದೆ ಅವರ ಬಳಿ ಇದ್ದ ಎಲ್ಲಾ ಲೆಟರ್ ಗಳನ್ನು ರಸ್ತೆ ಮೇಲೆ ಎಸೆದಿದ್ದಾನೆ. 

ಯುವಕರ ಕೃತ್ಯವನ್ನು ನೋಡಿದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಬಂದಾಗ ಮನೀಶ್ ಅವರ ಮಾತುಗಳನ್ನು ಕೇಳದೆ ರಾಡ್‌ ಹಿಡಿದು ಅವರಿಗೆ ಸಹ ಬೆದರಿಸಿದ್ದಾನೆ. 

ಮನೀಶ್ ನಿಂದಾಗಿ ತಮಗೆ 35,000 ರೂ.ಗಳ ನಷ್ಟವಾಗಿದೆ ಮತ್ತು ಎಲ್ಲಾ ಲೆಟರ್ ಗಳನ್ನು ಎಸೆದಿರುವುದು ಖಂಡನೀಯ ಕೃತ್ಯ ಎಂದು ಆರೋಪಿಸಿ ದಿನೇಶ್ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿ ಮನೀಶ್ ಪರಾರಿಯಾಗಿದ್ದು ಪೋಲೀಸರು ಶೋಧಕಾರ್ಯ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ S*x, ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT