ಚಿರಂಜೀವಿ ಸರ್ಜಾ ಪಾರ್ಥಿವ ಶರೀರ 
ರಾಜ್ಯ

ಚಿರು ಅಂತ್ಯಕ್ರಿಯೆ ವೇಳೆ ನಿಯಮ ಉಲ್ಲಂಘನೆ: 59 ದೂರು ದಾಖಲು

ಇತ್ತೀಚೆಗಷ್ಟೇ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನಗರದ ವಿವಿಧ ಠಾಣೆಗಳಲ್ಲಿ 59 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು: ಇತ್ತೀಚೆಗಷ್ಟೇ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನಗರದ ವಿವಿಧ ಠಾಣೆಗಳಲ್ಲಿ 59 ಪ್ರಕರಣಗಳು ದಾಖಲಾಗಿವೆ.

ನಿಯಮ ಪಾಲಿಸದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರೇ ಸ್ವಯಂಪ್ರೇರಿತವಾಗಿ ಸಿಲಿಕಾನ್ ಸಿಟಿಯ ಜಯನಗರ, ತಲಘಟ್ಟಪುರ, ಜಯನಗರ, ಬನಶಂಕರಿ, ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ರೋಗದ ಹಾವಳಿ ಹೆಚ್ಚಿದ್ದಾಗಲೇ ತೀವ್ರ ಹೃದಯಾಘಾತದಿಂದ ನಟ ಚಿರಂಜೀವಿ ಸರ್ಜಾ ಅವರು ಜೂ.7 ರಂದು ಕೊನೆಯುಸಿರೆಳಿದಿದ್ದರು.
ಏಕಾಏಕಿ ನಟನ ಸಾವು ಸ್ಯಾಂಡಲ್‌ವುಡ್ ಸೇರಿ ಕರುನಾಡಿಗೆ ಬರ ಸಿಡಿಲು ಬಡಿದಂತಾಗಿತ್ತು. ಅವರ ಪಾರ್ಥಿವ ಶರೀರವನ್ನು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರಿಸಲಾಗಿತ್ತು. 

ಕೇವಲ 39 ವರ್ಷದಲ್ಲಿ ಚಿರಂಜೀವಿ ತಮ್ಮ ಜೀವನಕ್ಕೆ ವಿದಾಯ ಹೇಳಿದ್ದರಿಂದ ಆಘಾತಕೊಳ್ಳಗಾದ ಅಭಿಮಾನಿ ದಂಡು ಸೇರಿ ಸ್ಯಾಂಡಲ್ ವುಡ್ ಕಲಾವಿದರು, ರಾಜಕೀಯ ದುರೀಣರು ಅವರಿಗೆ ಅಂತಿಮ ನಮನ ಸಲ್ಲಿಸಿದರು. 

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಸಂಖ್ಯಾತ ಜನರು ಪಾರ್ಥಿವ ಶರೀರ ವೀಕ್ಷಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ಸೂಚಿಸಿದ್ದ ಕೊರೊನಾ ರೋಗ ನಿಯಂತ್ರಣದ ನಿಯಮ‌ ಉಲ್ಲಂಘಿಸಿದ ಆರೋಪದಡಿ ವಿವಿಧ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ‌.

ಜೂ.8 ರಂದು ದಕ್ಷಿಣ ತಾಲೂಕು ನೆಲಗುಳಿ ಗ್ರಾಮದಲ್ಲಿರುವ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರು ಅಂತ್ಯ ಸಂಸ್ಕಾರ ಕಾರ್ಯ ನೆರವೇರಿತ್ತು. ಕೊರೋನಾ ನಿಯಮ ಉಲ್ಲಂಘಿಸಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT