ಸಚಿವ ಎಸ್ ಸುರೇಶ್ ಕುಮಾರ್ 
ರಾಜ್ಯ

ಎಸ್ಎಸ್ಎಲ್ ಸಿ ಪರೀಕ್ಷೆ; ಸಚಿವ ಸುರೇಶ್‌ ಕುಮಾರ್ ವಿರುದ್ಧ ಭಾಸ್ಕರ್ ರಾವ್ ಗೆ ದೂರು

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್‌ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್‌ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಹಿನ್ನೆಲೆಯಲ್ಲಿ ಸಚಿವರು ವಿರುದ್ಧ ಆರ್. ಐಯ್ಯರ್ ಎಂಬುವವರು ದೂರು ನೀಡಿದ್ದಾರೆ. ರಾಜ್ಯದಲ್ಲಿ ಕೊರೋನಾ ವೈರಸ್ ತನ್ನ ಜಾಲ ವಿಶಾಲವಾಗಿ ಪಸರಿಸಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಸಚಿವ ಸುರೇಶ್ ಕುಮಾರ್ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು‌ ನಿರ್ಧರಿಸಿದ್ದಾರೆ. ಇದರಿಂದ ವಿದ್ಯಾರ್ಥಿ ಪೋಷಕರು ಸೇರಿ ಶಿಕ್ಷಕರ ಕುಟುಂಬಗಳಿಗೆ ಕಷ್ಟವಾಗಲಿದ್ದು, ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಹೀಗಿದ್ದರೂ ಸಚಿವರು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆದರ್ಶ ಆರ್. ಐಯ್ಯರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರವೇ ಅವರು ಇಮೇಲ್​ ಮೂಲಕ ದೂರು ನೀಡಿದ್ದಾರೆ. ಅಲ್ಲದೇ, ಪಿಯುಸಿ ಇಂಗ್ಲಿಷ್​ ಪರೀಕ್ಷೆ ನಡೆಸುವ ಕ್ರಮವನ್ನು ಪ್ರಶ್ನಿಸಿ ಮಕ್ಕಳ ಆರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT