ಸಚಿವ ಎಸ್ ಸುರೇಶ್ ಕುಮಾರ್ 
ರಾಜ್ಯ

ಎಸ್ಎಸ್ಎಲ್ ಸಿ ಪರೀಕ್ಷೆ; ಸಚಿವ ಸುರೇಶ್‌ ಕುಮಾರ್ ವಿರುದ್ಧ ಭಾಸ್ಕರ್ ರಾವ್ ಗೆ ದೂರು

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್‌ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್‌ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಹಿನ್ನೆಲೆಯಲ್ಲಿ ಸಚಿವರು ವಿರುದ್ಧ ಆರ್. ಐಯ್ಯರ್ ಎಂಬುವವರು ದೂರು ನೀಡಿದ್ದಾರೆ. ರಾಜ್ಯದಲ್ಲಿ ಕೊರೋನಾ ವೈರಸ್ ತನ್ನ ಜಾಲ ವಿಶಾಲವಾಗಿ ಪಸರಿಸಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಸಚಿವ ಸುರೇಶ್ ಕುಮಾರ್ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು‌ ನಿರ್ಧರಿಸಿದ್ದಾರೆ. ಇದರಿಂದ ವಿದ್ಯಾರ್ಥಿ ಪೋಷಕರು ಸೇರಿ ಶಿಕ್ಷಕರ ಕುಟುಂಬಗಳಿಗೆ ಕಷ್ಟವಾಗಲಿದ್ದು, ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಹೀಗಿದ್ದರೂ ಸಚಿವರು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆದರ್ಶ ಆರ್. ಐಯ್ಯರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರವೇ ಅವರು ಇಮೇಲ್​ ಮೂಲಕ ದೂರು ನೀಡಿದ್ದಾರೆ. ಅಲ್ಲದೇ, ಪಿಯುಸಿ ಇಂಗ್ಲಿಷ್​ ಪರೀಕ್ಷೆ ನಡೆಸುವ ಕ್ರಮವನ್ನು ಪ್ರಶ್ನಿಸಿ ಮಕ್ಕಳ ಆರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ