ಸಾಂದರ್ಭಿಕ ಚಿತ್ರ 
ರಾಜ್ಯ

ವಿಕಾಸ ಸೌಧದಲ್ಲಿ ಸೋಂಕು ನಿವಾರಕ ಔಷಧಿ ಸಿಂಪಡಣೆ: ಶುಕ್ರವಾರ ರಜೆ

ಕೊರೋನಾ ಸೋಂಕು ನಿಯಂತ್ರಣ ಭಾಗವಾಗಿ ವಿಕಾಸಸೌಧ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ ಕೆಲಸಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಭಾಗವಾಗಿ ವಿಕಾಸಸೌಧ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ ಕೆಲಸಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

ಇತ್ತೀಚೆಗೆ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ವಿಕಾಸ ಸೌಧದಲ್ಲಿ ಸುತ್ತಾಡಿದ ಹಿನ್ನೆಲೆಯಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು.

ಸಚಿವಾಲಯದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮವಾಗಿ ಮತ್ತು ವೈರಸ್ ಹರಡುವುದನ್ನು ತಪ್ಪಿಸಲು ಗುರುವಾರ ಸಂಜೆ ವಿಕಾಸಸೌಧ ಕಟ್ಟಡದ ಎಲ್ಲಾ ಕೊಠಡಿಗಳು ಮತ್ತು ಕಾರಿಡಾರ್ ಗಳಿಗೆ ಬಿ.ಬಿ.ಎಂ.ಪಿ. ವತಿಯಿಂದ ಕ್ರಿಮಿ ನಾಶಕವನ್ನು ಪೂರ್ಣ ಪ್ರಮಾಣದಲ್ಲಿ ಸಿಂಪಡಿಸಲಾಯಿತು. 

ಹೀಗಾಗಿ ವಿಕಾಸಸೌಧ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೇ ಶುಕ್ರವಾರದಂದು ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT