ರಾಜ್ಯ

ಬಾಗಲಕೋಟೆ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Raghavendra Adiga

ಬಾಗಲಕೋಟೆ: ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.

28 ವರ್ಷದ ರೈತ ಶಂಕರಪ್ಪ ಅವರು ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1 ಲಕ್ಷ ರೂ. ಹಾಗೂ ಕುಳಗೇರಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 3 ಲಕ್ಷ ರೂ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ.

ಅಲ್ಲದೇ, ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಜಮೀನಿನಲ್ಲಿದ್ದ ಬೆಳೆದಿದ್ದ ಬೆಳೆ ಹಾನಿಗೀಡಾಗಿತ್ತು. ಹೀಗಾಗಿ ಆಗಿನಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಸಾಲ ಹೇಗೆ ಪಾವತಿಸುವುದು ಎಂದು ನೊಂದಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT