ಸಂಗ್ರಹ ಚಿತ್ರ 
ರಾಜ್ಯ

ಬಾಗಲಕೋಟೆ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.

ಬಾಗಲಕೋಟೆ: ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.

28 ವರ್ಷದ ರೈತ ಶಂಕರಪ್ಪ ಅವರು ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1 ಲಕ್ಷ ರೂ. ಹಾಗೂ ಕುಳಗೇರಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 3 ಲಕ್ಷ ರೂ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ.

ಅಲ್ಲದೇ, ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಜಮೀನಿನಲ್ಲಿದ್ದ ಬೆಳೆದಿದ್ದ ಬೆಳೆ ಹಾನಿಗೀಡಾಗಿತ್ತು. ಹೀಗಾಗಿ ಆಗಿನಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಸಾಲ ಹೇಗೆ ಪಾವತಿಸುವುದು ಎಂದು ನೊಂದಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!