ಸುಮಲತಾ ಅಂಬರೀಷ್ 
ರಾಜ್ಯ

ನಿಮ್ಮದು ಹೋರಾಟವಲ್ಲ ಸ್ವಾರ್ಥ ರಾಜಕಾರಣ: ಸಿಡಿದೆದ್ದ ಸುಮಲತಾ ಅಂಬರೀಷ್!

ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಲು ಆಗ್ರಹಿಸಿ ರೈತರು ಹಾಗೂ ವಿವಿಧ ಪಕ್ಷದ ಮುಖಂಡರ ಪ್ರತಿಭಟನೆ ಹಿನ್ನೆಲೆ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಲು ಆಗ್ರಹಿಸಿ ರೈತರು ಹಾಗೂ ವಿವಿಧ ಪಕ್ಷದ ಮುಖಂಡರ ಪ್ರತಿಭಟನೆ ಹಿನ್ನೆಲೆ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು,ಕಾರ್ಖಾನೆ ಬಂದ್ ಆಗಿದ್ದಾಗ, ಪಾಳು ಬಿದ್ದ ಸಮಯದಲ್ಲಿ ಬಾಯಿ ಮುಚ್ಚಿಕೊಂಡಿದ್ದವರು ಕಾರ್ಖಾನೆ ಆರಂಭವಾಗುತ್ತಿರುವ ಹೊತ್ತಿನಲ್ಲಿ ಕೋಪ, ರೋಷ, ಆವೇಶದೊಂದಿಗೆ ಹೋರಾಟಕ್ಕಿಳಿದಿದ್ದಾರೆ. ಇದು ಅವರ ಸ್ವಾರ್ಥ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಹೋರಾಟದ ನೆಪದಲ್ಲಿ ಕಾರ್ಖಾನೆ ಆರಂಭವಾಗುವುದನ್ನು ತಡೆಯುವುದು ಅವರ ಮೂಲ ಉದ್ದೇಶವೆಂದು ಕಿಡಿಕಾರಿದರು. 

ಸ್ವಾರ್ಥ ರಾಜಕಾರಣದಿಂದ ಏನನ್ನೂ ಸಾಧಿಸಿದಂತಾಗುವುದಿಲ್ಲ, ಸರ್ಕಾರಿ ಸ್ವಾಮ್ಯದಲ್ಲಿ ಕಾರ್ಖಾನೆ ಆರಂಭವಾಗದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹೇಳುತ್ತಿದ್ದಾರೆ. ಉಗ್ರ ಹೋರಾಟ ಎಂಬ ಮಾತನ್ನು ಹೇಳುವ ನೈತಿಕತೆ ನಿಮಗಿಲ್ಲ. ಗಡಿಯಲ್ಲಿ ಶತ್ರು ಸೈನ್ಯದೊಂದಿಗೆ ನಮ್ಮ ಸೈನಿಕರು ನಡೆಸುತ್ತಿರುವುದು ನಿಜವಾದ ಹೋರಾಟ. ಆ ಮಾತನ್ನು ನೀವು ಹೇಳಿದರೆ ಸೈನಿಕರಿಗೆ ಮಾಡುವ ಅವಮಾನ ಹಾಗೂ ರೈತರಿಗೆ ಮಾಡುವ ದ್ರೋಹ ಎಂದು ಹೇಳಿದರು.

ಸದ್ಯ ಈಗ ಯಾವ ಚುನಾವಣೆ ಸಹ ಇಲ್ಲ. ಆಗಿದ್ದರೂ ಕಾರ್ಖಾನೆ ತೆರೆಯಲು ನೀವು ಬಿಡುತ್ತಿಲ್ಲ. ನಿಮಗೇಕೆ ಈ ವಿಚಾರದಲ್ಲಿ ಆತಂಕ ಎಂದರು. ಜಿಲ್ಲೆಯ ಶಾಸಕರು ಓ ಅಂಡ್ ಎಂ ಮೂಲಕ ಕಾರ್ಖಾನೆ ತೆರೆಯಲು ವಿರೋಧಿಸುತ್ತಿದ್ದಾರೆ. ಖಾಸಗೀಕರಣ ಮಾಡಿ ಕಾರ್ಖಾನೆ ತೆರೆದರೆ ಉಗ್ರ ಹೋರಾಟ ಮಾಡುವ  ಎಚ್ಚರಿಕೆ ಕೊಡುತ್ತಾರೆ. ನಿಮ್ಮದು ಉಗ್ರ ಹೋರಾಟವಲ್ಲ. ಸ್ವಾರ್ಥ ರಾಜಕಾರಣ ಎಂದರು.

ದ್ವಂದ್ವ ನಿಲುವಿನ ಹೋರಾಟದಿಂದ ಯಾರನ್ನೂ ಮೋಸಗೊಳಿಸುವುದಕ್ಕೆ ಸಾಧ್ಯವಿಲ್ಲ. ಇದನ್ನು ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು. ಮೈಶುಗರ್ ಕಾರ್ಖಾನೆ ಆರಂಭವಾಗದೆ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀವು ಮಾಡುವ ಅಡಚಣೆಯಿಂದ ಕಾರ್ಖಾನೆ ಈಗಲೂ ಆರಂಭಗೊಳ್ಳದೆ ಇನ್ನಷ್ಟು ರೈತರು ಆತ್ಮಹತ್ಯೆಗೆ ಶರಣಾದರೆ ಅದಕ್ಕೆ ನೀವೇ ಹೊಣೆಯಾಗುತ್ತೀರಿ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT