ಸಂಗ್ರಹ ಚಿತ್ರ 
ರಾಜ್ಯ

ಮನೆಗೆ ನುಗ್ಗಿ ವೃದ್ಧೆ ಕೊಲೆ: ಚಿನ್ನಾಭರಣ ದೋಚಿ ಪರಾರಿ 

ದುಷ್ಕರ್ಮಿಗಳ ತಂಡವೊಂದು ಮನೆಗೆ ನುಗ್ಗಿ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಪ್ರಕರಣ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಕರಿಕ್ಯಾತನಹಳ್ಳಿಯಲ್ಲಿ ನಡೆದಿದೆ.

ಮಂಡ್ಯ: ದುಷ್ಕರ್ಮಿಗಳ ತಂಡವೊಂದು ಮನೆಗೆ ನುಗ್ಗಿ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಪ್ರಕರಣ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಕರಿಕ್ಯಾತನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಹನುಮೇಗೌಡರ ಪತ್ನಿ ಜಯಮ್ಮ (70) ಎಂಬುವರನ್ನು ಕೊಲೆ ಮಾಡಲಾಗಿದೆ. ಕೆ.ಆರ್ಪೇಟೆ-ನಾಗಮಂಗಲ ಮುಖ್ಯ ರಸ್ತೆಯ ಸರ್ಕಾರಿ ಶಾಲೆಯ ಎದುರಿನಲ್ಲಿರುವ ಮನೆಯಲ್ಲಿ ಹನುಮೇಗೌಡರ ಪತ್ನಿ ಜಯಮ್ಮ (70) ವಾಸವಿದ್ದರು, ಒಂಟಿಯಾಗಿದ್ದ ವಿಷಯವನ್ನು ತಿಳಿದಿದ್ದ ದುಷ್ಕರ್ಮಿಗಳು, ಸೋಮವಾರ ತಡರಾತ್ರಿ ಮನೆಯ ಮುಂಬಾಗಿಲು ಒಡೆದು ಒಳಗೆ ನುಗ್ಗಿ ವೃದ್ಧೆಯನ್ನು ಕೊಂದು ಮೈಮೇಲಿದ್ದ ಮಾಂಗಲ್ಯ ಸರ, ಓಲೆ, ಉಂಗುರ ಹಾಗೂ ಮಾಟಿ ಸೇರಿದಂತೆ ಸುಮಾರು 75 ಗ್ರಾಂಗಳಿಗೂ ಹೆಚ್ಚು ತೂಕದ ಆಭರಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಪ್ರಕರಣದಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT