ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ; ಪೊಲೀಸರಿಂದ ತೀವ್ರ ಪರಿಶೀಲನೆ

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ. 

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ

ಕೇಂದ್ರ ಆಂತರಿಕ ಪಡೆಯು ಮಾಹಿತಿ ನೀಡಿದ ಬಳಿಕ ಇದೀಗ ಈ ಅರಣ್ಯ ಪ್ರದೇಶದ ಸುತ್ತಲೂ ತೀವ್ರ ನಿಗಾವಹಿಸಲಾಗಿದ್ದು, ಪೊಲೀಸರು ಪರಿಶೀಲನೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

ಭಾರತದಲ್ಲಿ ನಿಷೇಧಗೊಂಡಿರುವ ಈ ಸ್ಯಾಟಲೈಟ್ ಫೋನ್'ನ್ನು ವಿದೇಶಿ ಪ್ರವಾಸಿಗರು ಬಳಸಿದ್ದಾರೆಯೇ, ನಕ್ಸಲರು ಅಥವಾ ಇತರೆ ಪಟ್ಟಭದ್ರ ಹಿತಾಸಕ್ತಿಗಳು ಬಳಸಿದ್ದಾರೆಂಯೇ ಎಂಬುದರ ಬಗ್ಗೆ ಅನುಮಾನಗಳು ಮೂಡತೊಡಗಿದ್ದು, ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ.ಆನಂದ್ ಕುಮಾರ್ ಅವರು, ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. 

ನಮಗೆ ದೊರತಿರುವ ಮಾಹಿತಿಗಳ ಅನ್ವಯ ಯಾರು ಸ್ಯಾಟಲೈಟ್ ಫೋನ್ ಬಳಕೆ ಮಾಡಿದ್ದಾರೆಂಬುದರ ಕುರಿತು ತನಿಖೆ ಆರಂಭಿಸಿದ್ದೇವೆ. ನಕ್ಸಲ್ ನಿಗ್ರಹ ಪಡೆ ಆ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿದೆ. ಪೊಲೀಸರು ಕೂಡ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ