ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ವಿರುದ್ದ ಹೋರಾಟ: ವಿಕ್ಟೋರಿಯಾ ಆಸ್ಪತ್ರೆ ನರ್ಸ್ ಗಳಿಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಗಳ ವಿತರಣೆ?

ತಮ್ಮ ಜೀವವನ್ನೇ ಪಣಕ್ಕಿಟ್ಟು, ಮಹಾಮಾರಿ ವೈರಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಚಿಕಿತ್ಸೆ ನಡಿ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯ ನರ್ಸ್ ಗಳಿಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಗಳನ್ನು ವಿತರಸಲಾಗಿದೆ ಎಂದು ಹೇಳಲಾಗುತ್ತಿದೆ. 

ಬೆಂಗಳೂರು; ತಮ್ಮ ಜೀವವನ್ನೇ ಪಣಕ್ಕಿಟ್ಟು, ಮಹಾಮಾರಿ ವೈರಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಚಿಕಿತ್ಸೆ ನಡಿ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯ ನರ್ಸ್ ಗಳಿಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಗಳನ್ನು ವಿತರಸಲಾಗಿದೆ ಎಂದು ಹೇಳಲಾಗುತ್ತಿದೆ. 

ಆಸ್ಪತ್ರೆಯ ನಾಲ್ವರು ಸಿಬ್ಬಂದಿಯಲ್ಲೂ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿರುವ ಸಿಬ್ಬಂದಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ನರ್ಸ್ ಗಳಿಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಗಳನ್ನು ವಿತರಿಸಿರುವುದು ಬೆಳಕಿಗೆ ಬಂದಿದೆ. 

ಈ ಬಗ್ಗೆ ನರ್ಸ್ ಗಳು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ಗಮನಕ್ಕೂ ತಂದಿದ್ದಾರೆಂದು ತಿಳಿದುಬಂದಿದೆ. ಈ ವರೆಗೂ ಆಸ್ಪತ್ರೆಯಲ್ಲಿ 13 ಮಂದಿಯಲ್ಲಿ ವೈರಸ್ ಕಾಣಿಸಿಕಂಡಿದೆ. ಇದರಲ್ಲಿ ವೈದ್ಯರು, ನರ್ಸ್ ಗಳು, ಗ್ರೂಪ್ ಡಿ ಹಾಗೂ ಲ್ಯಾಬ್ ಟೆಕ್ನಿಶಿಯನ್ಸ್ ಗಳೂ ಇದ್ದಾರೆಂದು ತಿಳಿದುಬಂದಿದೆ.
 
13 ಮಂದಿ ಪಾಸಿಟಿವ್ ಪ್ರಕರಣಗಳಲ್ಲಿ 4 ಮಂದಿ ನರ್ಸ್ ಗಳಿದ್ದಾರೆ. ನಾವು ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿದ್ದು, ನಮ್ಮ ಸುರಕ್ಷತೆಗಾಗಿ ಉತ್ತಮ ಗುಣಮಟ್ಟದ ಪಿಪಿಇ ಕಿಟ್ ಗಳನ್ನು ನೀಡಬೇಕು. ಒಂದು ಬಾರಿ ನೀಡಿದ್ದ ಪಿಪಿಇ ಕಿಟ್ ಗಳು ಈಗಾಗಲೇ ಹಾಳಾಗಿದೆ. ಇದೇ ಕಾರಣಕ್ಕೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಲ್ಲೂ ವೈರಸ್ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ನಾವು ನಮ್ಮ ದನಿಯನ್ನು ಎತ್ತಿದ್ದು, ಸಚಿವರೊಂದಿಗೂ ಮಾತುಕತೆ ನಡೆಸಿದ್ದೇವೆಂದು ನರ್ಸ್ ಒಬ್ಬರು ಹೇಳಿದ್ದಾರೆ.

ಆಸ್ಪತ್ರೆಯ ಆಡಳಿತ ಮಂಡಳಿ ನಾವು ಉತ್ತಮ ಗುಣಮಟ್ಟದ ಪಿಪಿಇ ಕಿಟ್ಸ್ ಗಳನ್ನು ನೀಡುತ್ತಿದ್ದೇವೆಂದು ಹೇಳುತ್ತಿದ್ದಾರೆ. ಸಾಕಷ್ಟು ಜನರು ಕಿಟ್ ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಅಂತಹ ಕಿಟ್ಸ್ ಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಬೇಕಿದೆ. ಆರಂಭದಲ್ಲಿ ನಮಗೆ ಉತ್ತಮ ಗುಣಮಟ್ಟದ ಪಿಪಿಇ ಕಿಟ್ಸ್ ಗಳನ್ನು ನೀಡಿದ್ದರು. ಆದರೆ, ಇದೀಗ ನೀಡುತ್ತಿಲ್ಲ. ಪಿಪಿಇ ಗಳ ಮೇಲೆ ಯಾವುದೇ ರೀತಿಯ ಗುಣಮಟ್ಟದ ಚಿನ್ಹೆಗಳಿಲ್ಲ. ಹೀಗಾಗಿ ಉತ್ತಮ ಗುಣಮಟ್ಟದ ಪಿಪಿಇ ಕಿಟ್ಸ್ ಗಳನ್ನು ನೀಡುವವರೆಗೂ ನಾವು ಕೆಲಸ ಮಾಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ. ಸಚಿವರ ಭರವಸೆಗಳ ಬಳಿಕವಷ್ಟೇ ನಾವು ನಮ್ಮ ಕಾರ್ಯವನ್ನು ಮುಂದುವರೆಸುತ್ತೇವೆಂದು ಮತ್ತೊಬ್ಬ ನರ್ಸ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT