ಸಂಗ್ರಹ ಚಿತ್ರ 
ರಾಜ್ಯ

ಸೋಂಕು ಲಕ್ಷಣ ಇಲ್ಲದವರು 10 ದಿನದ ಬಳಿಕ ಬಿಡುಗಡೆ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ 

ರೋಗ ಲಕ್ಷಣವಿಲ್ಲದ ಕೊರೋನಾ ಸೋಂಕಿತರನ್ನು 10 ದಿನದ ಬಳಿಕ ಸೋಂಕು ಪರೀಕ್ಷೆ ಇಲ್ಲದೆ ಕೊರೋನಾ ವೈರಸ್ ಕೇರ್ ಸೆಂಟರ್ ನಿಂದ ಬಿಡುಗಡೆ ಮಾಡಬಹುದು ಎಂದು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 

ಬೆಂಗಳೂರು: ರೋಗ ಲಕ್ಷಣವಿಲ್ಲದ ಕೊರೋನಾ ಸೋಂಕಿತರನ್ನು 10 ದಿನದ ಬಳಿಕ ಸೋಂಕು ಪರೀಕ್ಷೆ ಇಲ್ಲದೆ ಕೊರೋನಾ ವೈರಸ್ ಕೇರ್ ಸೆಂಟರ್ ನಿಂದ ಬಿಡುಗಡೆ ಮಾಡಬಹುದು ಎಂದು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 

ಈ ಹಿಂದೆ ಬಿಡುಗಡೆಗೂ ಮುನ್ನ ಕಡ್ಡಾಯವಾಗಿ ಎರಡು ಬಾರಿ ಸೋಂಕು ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಬಂದಿರಬೇಕಿತ್ತು. ಈಗ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಎಸಿಮ್ಟಾಟಿಕ್ ಸೋಂಕಿತರಿಗೆ ಪಾಸಿಟಿವ್ ವರದಿ ಬಂದ 10 ದಿನಗಳ ಬಳಿಕ ಯಾವುದೇ ಲಕ್ಷಣಗಳಿಲ್ಲದಿದ್ದರೆ ಪರೀಕ್ಷೆ ನಡೆಸದೆ ಬಿಡುಗಡೆ ಮಾಡಬಹುದು ಎಂದು ತಿಳಿಸಲಾಗಿದೆ. 

ಅಲ್ಲದೆ, ಆರಂಭದಲ್ಲಿ ಸೋಂಕು ಲಕ್ಷಣ ಕಾಣಿಸಿಕೊಂಡು ಚಿಕಿತ್ಸೆ ಬಳಿಕ ಗುಣಮುಖರಾದವರನ್ನು ಕೂಡಾ 10ನೇ ದಿನ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕು. ಮುಂದಿನ ಮೂರು ದಿನ ಯಾವುದೇ ಸೋಂಕು ಲಕ್ಷಣ ಿಲ್ಲವಾದರೆ ಅವರಿಗೂ 13ನೇ ದಿನ ಸೋಂಕು ಪರೀಕ್ಷೆ ಮಾಡದೇ ಬಿಡುಗಡೆ ಮಾಡಬಹುದು. 14 ದಿನಗಳವರೆಗೂ ಸೋಂಕು ಲಕ್ಷಣಗಳಿದ್ದು, ಗುಣಮುಖರಾಗದ ಸೋಂಕಿತರನ್ನು ಸಂಪೂರ್ಣ ಗುಣಮುಖರಾದ ಬಳಿಕ ಬಿಡುಗಡೆಗೆ ನಿರ್ಧರಿಸಬೇಕು. 

ಬಿಡುಗಡೆಯೂ ಮುನ್ನ ಮೂರು ದಿನ ಯಾವುದೇ ಸೋಂಕು ಲಕ್ಷಣವಿರಬಾರದು. ಉಳಿದಂತೆ ಎಚ್ಐವಿ, ಕಸಿ ಚಿಕಿತ್ಸೆಗೆ ಒಳಗಾದ ಸೋಂಕಿತರು ಸಂಪೂರ್ಣ ಗುಣಮುಖರಾದ ಬಳಿಕ ಒಮ್ಮೆ ಸೋಂಕು ಪರೀಕ್ಷೆ ಮಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆಂದು ಸೂಚಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT