ಮರಲಿಂಗಪ್ಪ ಕರ್ನಾಳ್ 
ರಾಜ್ಯ

ಯಾದಗಿರಿ: ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕನ ಹತ್ಯೆಗೆ ಯತ್ನ, ಮಾರಾಕಾಸ್ತ್ರಗಳಿಂದ ಹಲ್ಲೆ

ಯಾದಗಿರಿ ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ತಿಮ್ಮಣ್ಣ ಕರ್ನಾಳ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ಬೆಳಗ್ಗೆ ನಗರದ ಚಿತ್ತಾಪುರ ರಸ್ತೆಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆದಿದ್ದು, ಜನ‌ ಬೆಚ್ಚಿ ಬಿದ್ದಿದ್ದಾರೆ.

ಯಾದಗಿರಿ: ಯಾದಗಿರಿ ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ತಿಮ್ಮಣ್ಣ ಕರ್ನಾಳ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ಬೆಳಗ್ಗೆ ನಗರದ ಚಿತ್ತಾಪುರ ರಸ್ತೆಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆದಿದ್ದು, ಜನ‌ ಬೆಚ್ಚಿ ಬಿದ್ದಿದ್ದಾರೆ.

ಹಲ್ಲೆಗೊಳಗಾದ ಮರಿಲಿಂಗಪ್ಪ ಅವರು ಸುರಪುರ ತಾಲ್ಲೂಕಿನ ಖಾನಾಪುರ ಎಸ್.ಎಚ್, ಮತಕ್ಷೇತ್ರದ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಶಾಸಕ ರಾಜೂಗೌಡ ಅವರ ಆಪ್ತರಾಗಿದ್ದಾರೆ.

ಕಾರಿನಲ್ಲಿ ಬಂದ ಮೂವರು ಅಪರಿಚಿತರು ಮರಲಿಂಗಪ್ಪ ಕರ್ನಾಳ್ ಮೇಲೆ ತಲವಾರು ಹಾಗೂ ಮಚ್ಚಿನಿಂದ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡಿದ್ದಾರೆ. ಮರಲಿಂಗಪ್ಪ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 9.20ಕ್ಕೆ ಈ ಘಟನೆ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಮೂವರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಅವರು ಹೇಳಿದ್ದಾರೆ.

ಈ ಸಂಬಂಧ ಎಫ್‌ಐಆರ್‌ ದಾಖಲಿಸಿ ತನಿಖಾ ತಂಡ ರಚಿಸಲಾಗುವುದು. ಸಿಸಿಟಿವಿ ಕ್ಯಾಮರಾ ಪರಿಶೀಲಿಸಲಾಗುವುದು ಮತ್ತು ಶೀಘ್ರ ಆರೋಪಿಗಳನ್ನು ಬಂಧಿಸುವುದಾಗಿ ಸೋನವಣೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ ಚಳಿಗಾಲದ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಕಾರ್ಯತಂತ್ರ!

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!

'ಭಾರತಕ್ಕೆ ಸೇವೆ ನೀಡಲು ಸ್ಟಾರ್‌ಲಿಂಕ್ ಸಿದ್ಧ, ಗ್ರಾಮೀಣ ಸಂಪರ್ಕಕ್ಕೆ ಸಹಾಯ ಮಾಡುತ್ತದೆ': Elon Musk

ತಮಿಳುನಾಡು: ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಕನಿಷ್ಠ 11 ಮಂದಿ ಸಾವು, 20 ಜನರಿಗೆ ಗಾಯ!

Cricket: ಕೇವಲ 11 ರನ್ ಗೆ 3 ವಿಕೆಟ್; ಗೆಲುವಿನ ಸನಿಹ ಬಂದಿದ್ದ ದಕ್ಷಿಣ ಆಫ್ರಿಕಾ ಸೋಲಿನಲ್ಲೂ ದಾಖಲೆಗಳ ಸುರಿಮಳೆ!

SCROLL FOR NEXT