ಬೆಂಗಳೂರಿನ ಜಯದೇವ ಆಸ್ಪತ್ರೆ 
ರಾಜ್ಯ

ಬೆಂಗಳೂರು: ಜಯದೇವ ಆಸ್ಪತ್ರೆಗೂ ಕಾಲಿಟ್ಟ ಕರೋನಾ, ಹೊರರೋಗಿ ವಿಭಾಗ ಬಂದ್

ಕೊರೋನಾ ಸೋಂಕು ಜನತೆಯನ್ನಷ್ಟೇ ಅಲ್ಲ ವೈದ್ಯರನ್ನು ಸಹ ಬೆಚ್ಚಿಬೀಳಿಸುತ್ತಿದ್ದು, ನಗರದ ಜಯದೇವ ಆಸ್ಪತ್ರೆ ವೈದ್ಯರಿಗೂ ವಕ್ಕರಿಸಿದೆ.

ಬೆಂಗಳೂರು: ಕೊರೋನಾ ಸೋಂಕು ಜನತೆಯನ್ನಷ್ಟೇ ಅಲ್ಲ ವೈದ್ಯರನ್ನು ಸಹ ಬೆಚ್ಚಿಬೀಳಿಸುತ್ತಿದ್ದು, ನಗರದ ಜಯದೇವ ಆಸ್ಪತ್ರೆ ವೈದ್ಯರಿಗೂ ವಕ್ಕರಿಸಿದೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ 32 ವರ್ಷದ ವೈದ್ಯ ಸೇರಿದಂತೆ ನಾಲ್ವರು ಸೋಂಕು ತಗುಲಿರುವುದು ಬಹಳ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ ಜಯದೇವ ಹೊರರೋಗಿ ವಿಭಾಗವನ್ನು ಮುಚ್ಚಲಾಗಿದೆ.

ಸೋಂಕು ತಗುಲಿದ ನಂತರ ಇದೆ ಜೂನ್ 24 ರಿಂದ 27 ರವರಗೆ ಹೊರ ರೋಗಿಗಳ ವಿಭಾಗವನ್ನು ಮುಚ್ಚಲಾಗಿದೆ. ಪರಿಣಾಮ ಹೃದಯ ರೋಗಿಗಳಿಗೆ ಬಹಳ ತೊಂದೆಯಾಗಿದೆ. ಹೇಳಿ, ಕೇಳಿ ಹೃದಯ ರೋಗಕ್ಕೆ ಸಂಬಧಪಟ್ಟಂತೆ ಬಡವರಿಗೆ ಕೈಗೆಟುವ ದರದ ಉತ್ತಮ ಚಿಕಿತ್ಸೆ ಸಿಗುವ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಡೆದಿದೆ.

ಜಯದೇವ ಆಸ್ಪತ್ರೆಯ ಒಬ್ಬರು ವೈದ್ಯರು, ಡೇಟಾ ಎಂಟ್ರಿ ಆಪರೇಟರ್‌ ಮತ್ತು ಲ್ಯಾಬ್‌ ತಂತ್ರಜ್ಞರೊಬ್ಬರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಹಾಗೆಯೇ, ರಾಜಾಜಿನಗರ ಇಎಸ್‌ಐ ಆಸ್ಪತ್ರೆಯ ವೈದ್ಯರೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.

ಕಳೆದ ನಾಲ್ಕೈದು ದಿನಗಳಿಂದ ನಗರದಲ್ಲಿ ನಿತ್ಯವೂ ಸೋಂಕಿತರ ಸಂಖ್ಯೆ ಶತಕ ದಾಟುತ್ತಿದ್ದು, ಈವರೆಗೆ 1505 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 435 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಉಳಿದ 996 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 73 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಬೇಡ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಪಾಠ

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

ಪ್ರಾಣ ಉಳಿಸಿದ ಹೀರೋಗೆ ಪ್ರವಾಹವೇ ಕಂಟಕ: ತನ್ನ ಲೈಫ್ ಜಾಕೆಟ್ ಕೊಟ್ಟು ಜೀವ ರಕ್ಷಿಸಿದ ತರಬೇತುದಾರನ ದುರಂತ ಸಾವು!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!