ವಿಜಯಪುರ/ಬೆಂಗಳೂರು: ವಿಜಯಪುರ ಜಿಲ್ಲೆಯ ಖ್ವಾಜಾ ನಗರದ ಅಂಜುಮನ್ ಶಾಲೆಯಲ್ಲಿ ಓದುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಮಂಗಳವಾರ ಕೋವಿಡ್-19 ಸೋಂಕು ದೃಡಪಟ್ಟಿದೆ.
ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಅವಕಾಶ ನೀಡದೆ, ಮುಂದಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.