ಸಚಿವ ಭೈರತಿ ಬಸವರಾಜ್ 
ರಾಜ್ಯ

ಕಲಬುರ್ಗಿಗೆ 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ

ಕಲಬುರ್ಗಿ ನಗರಕ್ಕೆ 837 ಕೋಟಿ ರೂಪಾಯಿ ಕುಡಿಯುವ ನೀರಿನ ಯೋಜನೆಕಲಬುರ್ಗಿ ನಗರಕ್ಕೆ 24x7 ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ. 

ಕಲಬುರ್ಗಿ: ಕಲಬುರ್ಗಿ ನಗರಕ್ಕೆ 837 ಕೋಟಿ ರೂಪಾಯಿ ಕುಡಿಯುವ ನೀರಿನ ಯೋಜನೆಕಲಬುರ್ಗಿ ನಗರಕ್ಕೆ 24x7 ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ. 

ಕಲಬುರ್ಗಿಯಲ್ಲಿ ನಗರ ಪ್ರದಕ್ಷಿಣೆ ಮಾಡಿದ ನಂತರ ಮಾತನಾಡಿದ ಅವರು, 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ. ಜಲ ಶುದ್ಧೀಕರಣ ಘಟಕದಲ್ಲಿಯೂ ಹೊಸ ಯಂತ್ರೋಪಕರಣ ಅಳವಡಿಕೆ ಮಾಡಲಾಗುವುದು ಎಂದರು.

ಎಸ್.ಟಿ.ಪಿ ಪ್ಲಾಂಟ್ ನೀರು ನೇರವಾಗಿ ಭೀಮಾ ನದಿಗೆ ಬಿಡುವುದು ಅಪರಾಧ. ನೀರನ್ನು ಕಲಬುರ್ಗಿಯ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಮತ್ತು ಅಪ್ಪನ ಕೆರೆ ತುಂಬಿಸಲು ಬಳಕೆ ಮಾಡಿಕೊಳ್ಳಲಾಗುವುದು. 10 ಕೋಟಿ ರೂಪಾಯಿ ವೆಚ್ಚದಲ್ಲಿ ಅಪ್ಪನ ಕೆರೆ ಸೌಂದರೀಕರಣ ಮಾಡಲಾಗುವುದು. ಸಚಿವನಾಗಿ ಯಾವ ಕಾರಣಕ್ಕೂ ಮಲಗುವ ಕೆಲಸ ಮಾಡಲ್ಲ. ಏನೆಲ್ಲ ಕಾಮಗಾರಿಗಳಿವೆಯೋ ಅವೆಲ್ಲಕ್ಕೂ ವೇಗ ನೀಡಲಿದ್ದೇನೆ. ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಗೊಳಿಸೋ ಲೇಔಟ್ ಗಳಲ್ಲಿ ಶೇ 5 ರಷ್ಟು ನಿವೇಶನ ಪತ್ರಕರ್ತರಿಗೆ ಮೀಸಲಿಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT