ಸಚಿವ ಭೈರತಿ ಬಸವರಾಜ್ 
ರಾಜ್ಯ

ಕಲಬುರ್ಗಿಗೆ 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ

ಕಲಬುರ್ಗಿ ನಗರಕ್ಕೆ 837 ಕೋಟಿ ರೂಪಾಯಿ ಕುಡಿಯುವ ನೀರಿನ ಯೋಜನೆಕಲಬುರ್ಗಿ ನಗರಕ್ಕೆ 24x7 ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ. 

ಕಲಬುರ್ಗಿ: ಕಲಬುರ್ಗಿ ನಗರಕ್ಕೆ 837 ಕೋಟಿ ರೂಪಾಯಿ ಕುಡಿಯುವ ನೀರಿನ ಯೋಜನೆಕಲಬುರ್ಗಿ ನಗರಕ್ಕೆ 24x7 ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ. 

ಕಲಬುರ್ಗಿಯಲ್ಲಿ ನಗರ ಪ್ರದಕ್ಷಿಣೆ ಮಾಡಿದ ನಂತರ ಮಾತನಾಡಿದ ಅವರು, 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ. ಜಲ ಶುದ್ಧೀಕರಣ ಘಟಕದಲ್ಲಿಯೂ ಹೊಸ ಯಂತ್ರೋಪಕರಣ ಅಳವಡಿಕೆ ಮಾಡಲಾಗುವುದು ಎಂದರು.

ಎಸ್.ಟಿ.ಪಿ ಪ್ಲಾಂಟ್ ನೀರು ನೇರವಾಗಿ ಭೀಮಾ ನದಿಗೆ ಬಿಡುವುದು ಅಪರಾಧ. ನೀರನ್ನು ಕಲಬುರ್ಗಿಯ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಮತ್ತು ಅಪ್ಪನ ಕೆರೆ ತುಂಬಿಸಲು ಬಳಕೆ ಮಾಡಿಕೊಳ್ಳಲಾಗುವುದು. 10 ಕೋಟಿ ರೂಪಾಯಿ ವೆಚ್ಚದಲ್ಲಿ ಅಪ್ಪನ ಕೆರೆ ಸೌಂದರೀಕರಣ ಮಾಡಲಾಗುವುದು. ಸಚಿವನಾಗಿ ಯಾವ ಕಾರಣಕ್ಕೂ ಮಲಗುವ ಕೆಲಸ ಮಾಡಲ್ಲ. ಏನೆಲ್ಲ ಕಾಮಗಾರಿಗಳಿವೆಯೋ ಅವೆಲ್ಲಕ್ಕೂ ವೇಗ ನೀಡಲಿದ್ದೇನೆ. ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಗೊಳಿಸೋ ಲೇಔಟ್ ಗಳಲ್ಲಿ ಶೇ 5 ರಷ್ಟು ನಿವೇಶನ ಪತ್ರಕರ್ತರಿಗೆ ಮೀಸಲಿಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT