ಬೆಂಗಳೂರು ನಗರವೊಂದರಲ್ಲಿರುವ ಫೀವರ್ ಕ್ಲಿನಿಕ್ 
ರಾಜ್ಯ

ಖಾಸಗಿ ಆಸ್ಪತ್ರೆಗಳಲ್ಲಿ ಫೀವರ್ ಕ್ಲಿನಿಕ್, ಸ್ವ್ಯಾಬ್ ಸಂಗ್ರಹ ಕೇಂದ್ರಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ

ಕೊರೋನಾ ವೈರಸ್ ತಡೆಗೆ ನಗರದ 66 ಖಾಸಗಿ ಆಸ್ಪತ್ರೆಗಳಲ್ಲಿ ಜ್ವರದ ಕ್ಲಿನಿಕ್ ಗಳು ಮತ್ತು ಸ್ವ್ಯಾಬ್ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕೊರೋನಾ ವೈರಸ್ ತಡೆಗೆ ನಗರದ 66 ಖಾಸಗಿ ಆಸ್ಪತ್ರೆಗಳಲ್ಲಿ ಜ್ವರದ ಕ್ಲಿನಿಕ್ ಗಳು ಮತ್ತು ಸ್ವ್ಯಾಬ್ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊರೋನಾ ಲಕ್ಷಣವಿರುವವರು(ILI) ಮತ್ತು ತೀವ್ರ ಉಸಿರಾಟದ ತೊಂದರೆಯಿರುವವರ(SARI) ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜ್ವರದ ಕ್ಲಿನಿಕ್ ಮತ್ತು ಸ್ವ್ಯಾಬ್ ಸಂಗ್ರಹ ಕೇಂದ್ರಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಳ ಮಾಡುವಂತೆ ಸರ್ಕಾರ ಆದೇಶಿಸಿದೆ.ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜ್ವರದ ಕೇಂದ್ರಗಳು ಮತ್ತು ಸ್ವ್ಯಾಬ್ ಸಂಗ್ರಹ ಕೇಂದ್ರಗಳನ್ನು ತೆರೆಯಲು ಸರ್ಕಾರ ಸೂಚಿಸಿದೆ ಎಂದು ಖಾಸಗಿ ಆಸ್ಪತ್ರೆಗಳು ತಿಳಿಸಿವೆ.

ಕೋವಿಡ್-19 ಶಂಕಿತರನ್ನು  ಪತ್ತೆಹಚ್ಚಲು ರಾಜ್ಯ ಸರ್ಕಾರದ ಪರೀಕ್ಷೆ ನಿಯಮ ಪ್ರಕಾರ ಸ್ವ್ಯಾಬ್ ಪರೀಕ್ಷೆಗೆ ಒಳಪಡಿಸಲಾಗುವುದು. ಫೀವರ್ ಕ್ಲಿನಿಕ್ ಮತ್ತು ಸ್ವ್ಯಾಬ್ ಸಂಗ್ರಹ ಕೇಂದ್ರಗಳಿಗೆ ಸಾಫ್ಟ್ ವೇರ್ ಅಪ್ಲಿಕೇಷನ್ ಗಳನ್ನು ಬಳಸಿ ಸರ್ಕಾರ ಗುರುತುಪಡಿಸಿದ ಪ್ರಯೋಗಾಲಯಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ.

ಖಾಸಗಿ ಆಸ್ಪತ್ರೆಗಳು ಪ್ರಯೋಗಕ್ಕೆ ಒಪಿಡಿ ಶುಲ್ಕ ದರವನ್ನು ಮತ್ತು ಸ್ವ್ಯಾಬ್ ಪರೀಕ್ಷೆಗೆ ಗರಿಷ್ಠ 350 ರೂಪಾಯಿ ದರ ವಿಧಿಸುತ್ತದೆ. ಸರ್ಕಾರದ ಖರ್ಚಿನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ದೇಶದಲ್ಲಿಯೇ ಫೀವರ್ ಕ್ಲಿನಿಕ್ ಗಳನ್ನು ಆರಂಭಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ.

ಕರ್ನಾಟದಲ್ಲಿ ಈಗ ಪ್ರತಿನಿತ್ಯ 10 ಸಾವಿರ ರೋಗಿಗಳವರೆಗೆ ಕೊರೋನಾ ಪರೀಕ್ಷೆ ಮಾಡುವ ಸಾಮರ್ಥ್ಯವಿದೆ. ರಾಜ್ಯದಲ್ಲಿ 600ಕ್ಕೂ ಹೆಚ್ಚು ಫೀವರ್ ಕ್ಲಿನಿಕ್ ಮತ್ತು 1,172 ಸ್ವ್ಯಾಬ್ ಸಂಗ್ರಹ ಕೇಂದ್ರಗಳಿದ್ದು ಬೆಂಗಳೂರು ನಗರವೊಂದರಲ್ಲಿಯೇ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಫೀವರ್ ಕ್ಲಿನಿಕ್ ಗಳಾಗಿ ಪರಿವರ್ತಿಸಲಾಗಿದೆ. ಈಗಾಗಲೇ 52 ಸರ್ಕಾರದ ಫೀವರ್ ಕ್ಲಿನಿಕ್ ಮತ್ತು ಸ್ವ್ಯಾಬ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT