ಶಾಸಕರ ಭವನ 
ರಾಜ್ಯ

ಶಾಸಕರ ಭವನದಲ್ಲಿ ಕೊರೋನಾ: ನಿಯಂತ್ರಣಕ್ಕೆ ಕ್ರಮ

ಶಾಸಕರ ಭವನದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಸೇರಿದಂತೆ ಕೆಲವು ಸಿಬ್ಬಂದಿಗೆ ಕೊರೋನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸೋಂಕು ಪಸರಿಸದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. 

ಬೆಂಗಳೂರು: ಶಾಸಕರ ಭವನದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಸೇರಿದಂತೆ ಕೆಲವು ಸಿಬ್ಬಂದಿಗೆ ಕೊರೋನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸೋಂಕು ಪಸರಿಸದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. 

ವಿಧಾನ ಪರಿಷತ್ತಿನ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಹಾಗೂ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿಂದು ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಶಾಸಕರ ಭವನದ ಕಟ್ಟಡಗಳಿಗೆ ತುರ್ತು ಸೋಂಕು ನಿವಾರಣಾ ಔಷಧಿ ಸಿಂಪಡಿಸಬೇಕು. ಶಾಸಕರ ಭವನ ಮುಖ್ಯ ದ್ವಾರದಲ್ಲಿ ಶಾಸಕರ ಭವನಕ್ಕೆ ಪ್ರವೇಶಿಸುವವರು ಕಡ್ಡಾಯವಾಗಿ ತಮ್ಮ ಹೆಸರು, ಮೊಬೈಲ್ ಸಂಖ್ಯೆಯೊಂದಿಗೆ ಭೇಟಿಯ ಉದ್ದೇಶವನ್ನು ದಾಖಲಿಸಬೇಕು. ಪ್ರಾಥಮಿಕ ವೈದ್ಯಕೀಯ ತಪಾಸಣೆಗೆ ಒಳಗಾಗುವುದು ಕಡ್ಡಾಯಗಾಗಿದೆ. 

ಶಾಸಕರ ಭವನಕ್ಕೆ ಶಾಸಕರು, ಅವರ ಆಪ್ತ ಸಹಾಯಕ, ವಾಹನ ಚಾಲಕ, ಅಂಗರಕ್ಷಕರು ಒಟ್ಟು ನಾಲ್ಕು ಮಂದಿಗೆ ಸೀಮಿತಗೊಂಡು ಪ್ರವೇಶವನ್ನು ಮಿತಿಗೊಳಿಸಲು ತೀರ್ಮಾನಿಸಲಾಯಿತು. ಶಾಸಕರ ಭವನದ ಆವರಣದಲ್ಲಿ ಶಾಸಕರ ವಾಹನಗಳಿಗೆ ಮಾತ್ರ ಪಾರ್ಕಿಂಗ್ ವ್ಯವಸ್ಥೆಯನ್ನು ಸೀಮಿತಗೊಳಿಸಿ, ಎಲ್ಲಾ ಸಿಬ್ಬಂದಿಗಳಿಗೆ ಕೋವಿಡ್ -19 ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ.

ಅಲ್ಲದೆ ಶಾಸಕರ ಭವನದಲ್ಲಿ ಶಾಸಕರ ಹೊರತಾಗಿ ತಂಗಿರುವವರ ವಿವರಗಳನ್ನು ಪಡೆದು, ಅನಗತ್ಯವಾಗಿ ನೆಲೆಸಿರುವವರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ವಿಧಾನ ಮಂಡಲದ ಸಮಿತಿಗಳ ಸಭೆಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಅಧಿಕಾರಿಗಳ ಸಂಖ್ಯೆಗಳನ್ನು ಅಗತ್ಯಕ್ಕೆ ತಕ್ಕಂತೆ ಸೀಮಿತಗೊಳಿಸಿ, ಸಭೆ ನಡೆಸಲು ಎಲ್ಲಾ ಸಮಿತಿಯ ಅಧ್ಯಕ್ಷರುಗಳಿಗೆ ವಿವರಿಸುವಂತೆ ಸೂಚಿಸಲು ತೀರ್ಮಾನಿಸಲಾಗಿದೆ. 

ಸಭೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT