ಶಾಸಕರ ಭವನ 
ರಾಜ್ಯ

ಶಾಸಕರ ಭವನದಲ್ಲಿ ಕೊರೋನಾ: ನಿಯಂತ್ರಣಕ್ಕೆ ಕ್ರಮ

ಶಾಸಕರ ಭವನದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಸೇರಿದಂತೆ ಕೆಲವು ಸಿಬ್ಬಂದಿಗೆ ಕೊರೋನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸೋಂಕು ಪಸರಿಸದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. 

ಬೆಂಗಳೂರು: ಶಾಸಕರ ಭವನದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಸೇರಿದಂತೆ ಕೆಲವು ಸಿಬ್ಬಂದಿಗೆ ಕೊರೋನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸೋಂಕು ಪಸರಿಸದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. 

ವಿಧಾನ ಪರಿಷತ್ತಿನ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಹಾಗೂ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿಂದು ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಶಾಸಕರ ಭವನದ ಕಟ್ಟಡಗಳಿಗೆ ತುರ್ತು ಸೋಂಕು ನಿವಾರಣಾ ಔಷಧಿ ಸಿಂಪಡಿಸಬೇಕು. ಶಾಸಕರ ಭವನ ಮುಖ್ಯ ದ್ವಾರದಲ್ಲಿ ಶಾಸಕರ ಭವನಕ್ಕೆ ಪ್ರವೇಶಿಸುವವರು ಕಡ್ಡಾಯವಾಗಿ ತಮ್ಮ ಹೆಸರು, ಮೊಬೈಲ್ ಸಂಖ್ಯೆಯೊಂದಿಗೆ ಭೇಟಿಯ ಉದ್ದೇಶವನ್ನು ದಾಖಲಿಸಬೇಕು. ಪ್ರಾಥಮಿಕ ವೈದ್ಯಕೀಯ ತಪಾಸಣೆಗೆ ಒಳಗಾಗುವುದು ಕಡ್ಡಾಯಗಾಗಿದೆ. 

ಶಾಸಕರ ಭವನಕ್ಕೆ ಶಾಸಕರು, ಅವರ ಆಪ್ತ ಸಹಾಯಕ, ವಾಹನ ಚಾಲಕ, ಅಂಗರಕ್ಷಕರು ಒಟ್ಟು ನಾಲ್ಕು ಮಂದಿಗೆ ಸೀಮಿತಗೊಂಡು ಪ್ರವೇಶವನ್ನು ಮಿತಿಗೊಳಿಸಲು ತೀರ್ಮಾನಿಸಲಾಯಿತು. ಶಾಸಕರ ಭವನದ ಆವರಣದಲ್ಲಿ ಶಾಸಕರ ವಾಹನಗಳಿಗೆ ಮಾತ್ರ ಪಾರ್ಕಿಂಗ್ ವ್ಯವಸ್ಥೆಯನ್ನು ಸೀಮಿತಗೊಳಿಸಿ, ಎಲ್ಲಾ ಸಿಬ್ಬಂದಿಗಳಿಗೆ ಕೋವಿಡ್ -19 ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ.

ಅಲ್ಲದೆ ಶಾಸಕರ ಭವನದಲ್ಲಿ ಶಾಸಕರ ಹೊರತಾಗಿ ತಂಗಿರುವವರ ವಿವರಗಳನ್ನು ಪಡೆದು, ಅನಗತ್ಯವಾಗಿ ನೆಲೆಸಿರುವವರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ವಿಧಾನ ಮಂಡಲದ ಸಮಿತಿಗಳ ಸಭೆಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಅಧಿಕಾರಿಗಳ ಸಂಖ್ಯೆಗಳನ್ನು ಅಗತ್ಯಕ್ಕೆ ತಕ್ಕಂತೆ ಸೀಮಿತಗೊಳಿಸಿ, ಸಭೆ ನಡೆಸಲು ಎಲ್ಲಾ ಸಮಿತಿಯ ಅಧ್ಯಕ್ಷರುಗಳಿಗೆ ವಿವರಿಸುವಂತೆ ಸೂಚಿಸಲು ತೀರ್ಮಾನಿಸಲಾಗಿದೆ. 

ಸಭೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT