ರಾಜ್ಯ

ಬಳ್ಳಾರಿ: ಸಿಡಿಲು ಬಡಿದು ರೈತ ಸಾವು

Lingaraj Badiger

ಬಳ್ಳಾರಿ: ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗುತ್ತಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಸೋಗಿ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು, ನೀರು ಹಾಯಿಸಲು ಜಮೀನಿಗೆ ತೆರಳಿದ್ದ ರೈತ ಚಂದ್ರಪ್ಪ(45) ಸಿಡಿಲಿಗೆ ಬಲಿಯಾಗಿದ್ದಾರೆ.

ಮಳೆ ಪ್ರಾರಂಭವಾಗುತ್ತಿದ್ದಂತೆ ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡಿದ್ದ ಚಂದ್ರಪ್ಪ ಅವರನ್ನು ಕೂಡಲೆ ಸೋಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ರೈತ ಮೃತಪಟ್ಟಿದ್ದಾರೆ.

ಈ ಸಂಬಂಧ ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT