ವೃಷಭಾವತಿ ನದಿ 
ರಾಜ್ಯ

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಕೊಚ್ಚಿ ಹೋದ ವೃಷಭಾವತಿ ನದಿ ತಡೆಗೋಡೆ

ಗುರುವಾರ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಕೆಂಗೇರಿಯ ಮೈಲಸಂದ್ರ ವ್ಯಾಪ್ತಿಯಲ್ಲಿ ಕೆಂಗೇರಿ ಮೋರಿ (ವೃಷಭಾವತಿ ನದಿ) ಹಾಕಿದ್ದ ತಡೆಗೋಡೆ ಕುಸಿದ ಪರಿಣಾಮ ರಸ್ತೆಯ ಮೇಲೆ ನೀರು ನುಗ್ಗಿದೆ. ಹೀಗಾಗಿ, ಕೆಂಗೇರಿ ಸಮೀಪ ಭಾರೀ ಟ್ರಾಫಿಕ್​ ಜಾಮ್​ ಉಂಟಾಗಿತ್ತು.

ಬೆಂಗಳೂರು: ಗುರುವಾರ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಕೆಂಗೇರಿಯ ಮೈಲಸಂದ್ರ ವ್ಯಾಪ್ತಿಯಲ್ಲಿ ಕೆಂಗೇರಿ ಮೋರಿ (ವೃಷಭಾವತಿ ನದಿ) ಹಾಕಿದ್ದ ತಡೆಗೋಡೆ ಕುಸಿದ ಪರಿಣಾಮ ರಸ್ತೆಯ ಮೇಲೆ ನೀರು ನುಗ್ಗಿದೆ. ಹೀಗಾಗಿ, ಕೆಂಗೇರಿ ಸಮೀಪ ಭಾರೀ ಟ್ರಾಫಿಕ್​ ಜಾಮ್​ ಉಂಟಾಗಿತ್ತು.

ನಿನ್ನೆ ಮಧ್ಯಾಹ್ನದಿಂದ ಸುರಿದ ಮಳೆಗೆ ವೃಷಭಾವತಿ ನದಿ ಉಕ್ಕಿ ಹರಿದಿತ್ತು. ಕೆಂಗೇರಿಯ ದುಬಾಸಿಪಾಳ್ಯ ಬಳಿ ನದಿಯ ಹರಿವಿನ ರಭಸಕ್ಕೆ ತಡೆಗೋಡೆ ಕೊಚ್ಚಿಹೋಗಿದೆ. ತಡೆಗೋಡೆ ಕೊಚ್ಚಿಹೋದ ಪರಿಣಾಮ ಮೈಸೂರು ರಸ್ತೆಗೆ ನೀರು ಹರಿದಿದ್ದು, ರಸ್ತೆಯ ಒಂದು ಭಾಗ ಕುಸಿತವಾಗಿದೆ.

ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ವೃಷಭಾವತಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಯಿತು. ನೀರಿನ ರಭಸಕ್ಕೆ ಕೆಂಗೇರಿ ಸಮೀಪ ಹೆದ್ದಾರಿಗೆ ಹೊಂದಿಕೊಂಡಿರುವ ನದಿಯ ತಡೆಗೋಡೆ ಸಂಜೆ 5.30ರ ವೇಳೆಗೆ ಸುಮಾರು 300 ಮೀಟರ್‌ ಉದ್ದ ಕುಸಿದಿದೆ. ತಡೆಗೋಡೆ ಕುಸಿದಿರುವ ಕಡೆ ರಸ್ತೆಯೂ ಬಿರುಕು ಬಿಟ್ಟು ಆತಂಕ ಸೃಷ್ಟಿಯಾಗಿತ್ತು. ನೀರು ಹೆಚ್ಚಿನ ಪ್ರಮಾಣದಲ್ಲಿ  ಹೆದ್ದಾರಿ ಮೇಲೆ ಹರಿದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ಥವಾಗಿತ್ತು.

ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ನೀರಿನ ಹರಿವು ಕಡಿಮೆಯಾಗದೇ ದುರಸ್ಥಿ ಕಾಮಗಾರಿ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ. ರಾತ್ರಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT