ಶಶಿಕಲಾ 
ರಾಜ್ಯ

ಶೀಘ್ರದಲ್ಲೇ ಶಶಿಕಲಾ ನಟರಾಜನ್ ಬಿಡುಗಡೆ ಹೇಳಿಕೆ: ಕಾರಾಗೃಹ ಇಲಾಖೆ ಸ್ಪಷ್ಟನೆ

ಉಚ್ಚಾಟಿತ ಎಐಎಡಿಎಂಕೆ ಮುಖಂಡೆ ವಿ.ಕೆ.ಶಶಿಕಲಾ ಅವರನ್ನು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ಹೇಳಿಕೆಯನ್ನು ಬೆಂಗಳೂರು ಕೇಂದ್ರ ಕಾರಾಗೃಹ ಅಧಿಕಾರಿಗಳು ನಿರಾಕರಿಸಿದ್ದಾರೆ.

ಬೆಂಗಳೂರು: ಉಚ್ಚಾಟಿತ ಎಐಎಡಿಎಂಕೆ ಮುಖಂಡೆ ವಿ.ಕೆ.ಶಶಿಕಲಾ ಅವರನ್ನು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ಹೇಳಿಕೆಯನ್ನು ಬೆಂಗಳೂರು ಕೇಂದ್ರ ಕಾರಾಗೃಹ ಅಧಿಕಾರಿಗಳು ನಿರಾಕರಿಸಿದ್ದಾರೆ.

ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗಲಿರುವ ಕೈದಿಗಳ ಪಟ್ಟಿ ಸಿದ್ಧವಾಗಿದ್ದು ಅದರಲ್ಲಿ ಶಶಿಕಲಾ ಅವರ ಹೆಸರನ್ನು ಇನ್ನೂ ಪಟ್ಟಿಗೆ ಸೇರಿಸಿಲ್ಲ ಎಂದು ಜೈಲು ಇಲಾಖೆ ಮೂಲಗಳು ತಿಳಿಸಿವೆ.

ಅಪರಾಧಿಯನ್ನು ಬಿಡುಗಡೆ ಮಾಡುವಾಗ ಹಲವಾರು ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಅವರು ಬಿಡುಗಡೆಗೆ ಅರ್ಹರಾದ ದಿನಗಳು, ಹಿರಿಯ ಅಧಿಕಾರಿಗಳು ನೀಡಿದ ವಿಶೇಷ ರಜೆ ಮತ್ತು ಅವರು ಪೆರೋಲ್ ಪಡೆದ ದಿನಗಳ ಸಂಖ್ಯೆ, ಅವರನ್ನು ಬಿಡುಗಡೆ ಮಾಡುವಾಗ ಎಲ್ಲವನ್ನೂ  ಪರಿಗಣಿಸಲಾಗುತ್ತದೆ.

ಕರ್ನಾಟಕ ಕಾರಾಗೃಹ ಇಲಾಖೆಯ ನಿಯಮಾವಳಿಗಳ ಪ್ರಕಾರ, ಸನ್ನಡತೆಗಾಗಿ ತಿಂಗಳಲ್ಲಿ ಮೂರು ದಿನ, ಶಿಸ್ತು ಮತ್ತಿತರ ಕಾರಣಗಳಿಗಾಗಿ ಮೂರು ದಿನ ರಜೆ ನಿಗದಿ ಮಾಡಲಾಗಿರುತ್ತದೆ. ವಿಶೇಷಾಧಿಕಾರದಲ್ಲಿ ಸೂಪರಿಂಟೆಂಡ್ 30 ದಿನಗಳ ಪೆರೋಲ್ ಮಾಡಬಹುದಾಗಿದೆ. ಮತ್ತು ಐಜಿ 60 ದಿನ ಪೆರೋಲ್ ನೀಡಬಹುದಾಗಿದೆ.
 
ಈ ಎಲ್ಲಾ ಅಂಶಗಳನ್ನು ಅಪರಾಧಿಯನ್ನು ಬಿಡುಗಡೆ ಮಾಡುವ ವೇಳೆ ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.  ಹೀಗಾಗಿ ಆಗಸ್ಟ್ ನಲ್ಲಿ ಬಿಡುಗಡೆಯಾಗಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಶಿಕಲಾ ಮತ್ತಿಬ್ಬರ ಬಿಡುಗಡೆ ಸಂಬಂಧ ಇನ್ನೂ ನಿರ್ಧಾರವಾಗಿಲ್ಲ,ಮುಂದಿನ  30 ದಿನಗಳಲ್ಲಿ ಬಿಡುಗಡೆಯಾಗುವ ಪಟ್ಟಿಯಲ್ಲಿ ಶಶಿಕಲಾ ಹೆಸರಿಲ್ಲ ಎಂದು ಹೇಳಿದ್ದಾರೆ.

ಆದಾಯಕ್ಕೂ ಮೀರಿ ಅಧಿಕ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಶಿಕಲಾ, ಇಳವರಸಿ ಮತ್ತು ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ2017ರ ಫೆಬ್ರವರಿಯಿಂದ ಜೈಲುವಾಸ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT