ಶಶಿಕಲಾ 
ರಾಜ್ಯ

ಶೀಘ್ರದಲ್ಲೇ ಶಶಿಕಲಾ ನಟರಾಜನ್ ಬಿಡುಗಡೆ ಹೇಳಿಕೆ: ಕಾರಾಗೃಹ ಇಲಾಖೆ ಸ್ಪಷ್ಟನೆ

ಉಚ್ಚಾಟಿತ ಎಐಎಡಿಎಂಕೆ ಮುಖಂಡೆ ವಿ.ಕೆ.ಶಶಿಕಲಾ ಅವರನ್ನು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ಹೇಳಿಕೆಯನ್ನು ಬೆಂಗಳೂರು ಕೇಂದ್ರ ಕಾರಾಗೃಹ ಅಧಿಕಾರಿಗಳು ನಿರಾಕರಿಸಿದ್ದಾರೆ.

ಬೆಂಗಳೂರು: ಉಚ್ಚಾಟಿತ ಎಐಎಡಿಎಂಕೆ ಮುಖಂಡೆ ವಿ.ಕೆ.ಶಶಿಕಲಾ ಅವರನ್ನು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ಹೇಳಿಕೆಯನ್ನು ಬೆಂಗಳೂರು ಕೇಂದ್ರ ಕಾರಾಗೃಹ ಅಧಿಕಾರಿಗಳು ನಿರಾಕರಿಸಿದ್ದಾರೆ.

ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗಲಿರುವ ಕೈದಿಗಳ ಪಟ್ಟಿ ಸಿದ್ಧವಾಗಿದ್ದು ಅದರಲ್ಲಿ ಶಶಿಕಲಾ ಅವರ ಹೆಸರನ್ನು ಇನ್ನೂ ಪಟ್ಟಿಗೆ ಸೇರಿಸಿಲ್ಲ ಎಂದು ಜೈಲು ಇಲಾಖೆ ಮೂಲಗಳು ತಿಳಿಸಿವೆ.

ಅಪರಾಧಿಯನ್ನು ಬಿಡುಗಡೆ ಮಾಡುವಾಗ ಹಲವಾರು ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಅವರು ಬಿಡುಗಡೆಗೆ ಅರ್ಹರಾದ ದಿನಗಳು, ಹಿರಿಯ ಅಧಿಕಾರಿಗಳು ನೀಡಿದ ವಿಶೇಷ ರಜೆ ಮತ್ತು ಅವರು ಪೆರೋಲ್ ಪಡೆದ ದಿನಗಳ ಸಂಖ್ಯೆ, ಅವರನ್ನು ಬಿಡುಗಡೆ ಮಾಡುವಾಗ ಎಲ್ಲವನ್ನೂ  ಪರಿಗಣಿಸಲಾಗುತ್ತದೆ.

ಕರ್ನಾಟಕ ಕಾರಾಗೃಹ ಇಲಾಖೆಯ ನಿಯಮಾವಳಿಗಳ ಪ್ರಕಾರ, ಸನ್ನಡತೆಗಾಗಿ ತಿಂಗಳಲ್ಲಿ ಮೂರು ದಿನ, ಶಿಸ್ತು ಮತ್ತಿತರ ಕಾರಣಗಳಿಗಾಗಿ ಮೂರು ದಿನ ರಜೆ ನಿಗದಿ ಮಾಡಲಾಗಿರುತ್ತದೆ. ವಿಶೇಷಾಧಿಕಾರದಲ್ಲಿ ಸೂಪರಿಂಟೆಂಡ್ 30 ದಿನಗಳ ಪೆರೋಲ್ ಮಾಡಬಹುದಾಗಿದೆ. ಮತ್ತು ಐಜಿ 60 ದಿನ ಪೆರೋಲ್ ನೀಡಬಹುದಾಗಿದೆ.
 
ಈ ಎಲ್ಲಾ ಅಂಶಗಳನ್ನು ಅಪರಾಧಿಯನ್ನು ಬಿಡುಗಡೆ ಮಾಡುವ ವೇಳೆ ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.  ಹೀಗಾಗಿ ಆಗಸ್ಟ್ ನಲ್ಲಿ ಬಿಡುಗಡೆಯಾಗಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಶಿಕಲಾ ಮತ್ತಿಬ್ಬರ ಬಿಡುಗಡೆ ಸಂಬಂಧ ಇನ್ನೂ ನಿರ್ಧಾರವಾಗಿಲ್ಲ,ಮುಂದಿನ  30 ದಿನಗಳಲ್ಲಿ ಬಿಡುಗಡೆಯಾಗುವ ಪಟ್ಟಿಯಲ್ಲಿ ಶಶಿಕಲಾ ಹೆಸರಿಲ್ಲ ಎಂದು ಹೇಳಿದ್ದಾರೆ.

ಆದಾಯಕ್ಕೂ ಮೀರಿ ಅಧಿಕ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಶಿಕಲಾ, ಇಳವರಸಿ ಮತ್ತು ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ2017ರ ಫೆಬ್ರವರಿಯಿಂದ ಜೈಲುವಾಸ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT