ಡಿಸಿಎಂ ಲಕ್ಷ್ಮಣ ಸವದಿ 
ರಾಜ್ಯ

ಕೊರೋನಾ ಭೀತಿಯಿಂದ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖ, ಅಗತ್ಯ ಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಆದೇಶ

ಕೊರೋನಾ ಭಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಮುಖವಾಗಿರುವ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಯ ಆದಾಯದಲ್ಲಿ ತೀವ್ರ ಕುಸಿತ ಉಂಟಾಗುತ್ತಿದೆ. 

ಬೆಂಗಳೂರು: ಕೊರೋನಾ ಭಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಮುಖವಾಗಿರುವ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಯ ಆದಾಯದಲ್ಲಿ ತೀವ್ರ ಕುಸಿತ ಉಂಟಾಗುತ್ತಿದೆ.  ಆದ್ದರಿಂದ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಸಿಬ್ಬಂದಿಗಳಿಗೆ ಯಾವುದೇ ಅನಾನುಕೂಲತೆ ಆಗದ ರೀತಿಯಲ್ಲಿ ಅನಗತ್ಯ ವೆಚ್ಚಗಳನ್ನು ಕಡಿಮೆಗೊಳಿಸುವ ಸಂಬಂಧ ಹಲವಾರು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ, ಈಶಾನ್ಯ ಸಾರಿಗೆ ಸಂಸ್ಥೆ ಮತ್ತು ವಾಯುವ್ಯ ಸಾರಿಗೆ ಸಂಸ್ಥೆಗಳಲ್ಲಿ ಈ ಬಗ್ಗೆ ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಲು ಏರ್ಪಡಿಸಲಾಗಿದ್ದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ರೂಪುರೇಷೆ ಅಂತಿಮಗೊಳಿಸಲಾಗಿದೆ.

ಸಾರಿಗೆ ಸಂಸ್ಥೆಗಳಲ್ಲಿ ಯಾರೊಬ್ಬರೂ ಕರ್ತವ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಹಾಗೂ ಎಲ್ಲರಿಗೂ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತಾಗಲು ರೊಟೇಷನ್ ಆಧಾರದಲ್ಲಿ ಸಿಬ್ಬಂದಿಗಳನ್ನು ಇದೇ ಮೊದಲ ಬಾರಿಗೆ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಹೋಂ ಗಾರ್ಡ್ಸ್ (ಗೃಹ ರಕ್ಷಕ) ಸಿಬ್ಬಂದಿಗಳ ಬದಲಿಗೆ ಸಾರಿಗೆ ಸಂಸ್ಥೆಗಳಲ್ಲಿ ಆಸಕ್ತಿ ಹೊಂದಿರುವಂತಹ ಸಿಬ್ಬಂದಿಗಳನ್ನು ಭದ್ರತಾ ರಕ್ಷಕ ಹುದ್ದೆಗಳಿಗೆ ಉಪಯೋಗಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಅಷ್ಟೇ ಅಲ್ಲ ಇದರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಾಜಿ ಸೈನಿಕರುಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಸಾರಿಗೆ ಸಿಬ್ಬಂದಿಗಳು ಕೊರೋನಾ ಭಯದ ಈ ದಿನಗಳಲ್ಲಿಯೂ ಸಹ ಅತ್ಯಂತ ಕಾಳಜಿಯಿಂದ ಮತ್ತು ದಿಟ್ಟತನದಿಂದ ತಮ್ಮ ಸೇವೆ ಸಲ್ಲಿಸುತ್ತಿರುವುದನ್ನು ಗಮನಿಸಿ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಅವರ ಆರೋಗ್ಯದ ಆಧಾರದ ಮೇಲೆ ಉದಾರವಾಗಿ ರಜೆ ಮಂಜೂರು ಮಾಡಲಾಗುವುದು. ಅಷ್ಟೇ ಅಲ್ಲ ಹೃದಯಬೇನೆ, ರಕ್ತದ ಒತ್ತಡಗಳಂತಹ ಕಾಯಿಲೆ ಇರುವರಿಗೆ ಅಗತ್ಯ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗುವುದು. ಗರ್ಭಿಣಿ ಸಿಬ್ಬಂದಿಗಳಿಗೆ ಲಘು ಕರ್ತವ್ಯದ ಮೇಲೆ ನಿಯೋಜಿಸಲು ಆದೇಶ ಮಾಡಲಾಗಿದೆ.
ಅನಗತ್ಯವಾಗಿ ಹೆಚ್ಚುವರಿಯಾಗಿದ್ದ ಕೆಲವು ಹೊರಗುತ್ತಿಗೆ ಸಿಬ್ಬಂದಿಗಳನ್ನು ಕಡಿಮೆ ಮಾಡಲು ಆಡಳಿತಾತ್ಮಕ ಕ್ರಮಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ.

ಬಸ್ ಸಂಚಾರಗಳು ಮತ್ತು ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವುದರಿಂದ ತಮಗೆ ಆದಾಯ ಕೂಡ ಇಳಿಮುಖವಾಗಿದೆ ಆದ್ದರಿಂದ ಬಸ್ ನಿಲ್ದಾಣಗಳಲ್ಲಿ ಇರುವ ವಾಣಿಜ್ಯ ಮಳಿಗೆಗಳ ಬಾಡಿಗೆದಾರರು ಒಂದು ತಿಂಗಳ ಬಾಡಿಗೆಯನ್ನು ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ನೀಡುವಂತೆ ಕೋರಿರುತ್ತಾರೆ ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT