ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಕೇವಲ ಒಂದು ಮಾಸ್ಕ್, ಒಂದೇ ಸ್ಯಾನಿಟೈಸರ್; ಆಶಾ ಕಾರ್ಯಕರ್ತೆಯರ ಅಳಲು

ಮಹಾಮಾರಿ ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಜಿಲ್ಲಾಡಳಿತ ಸರಿಯಾದ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಮೈಸೂರು: ಮಹಾಮಾರಿ ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಜಿಲ್ಲಾಡಳಿತ ಸರಿಯಾದ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಕಳೆದ ಮೂರು ತಿಂಗಳಿಂದ ಕಂಟೈನ್ ಮೆಂಟ್ ಜೋನ್ ನಲ್ಲಿ ಆರೋಗ್ಯ ಸಮೀಕ್ಷೆ ನಡೆಸುತ್ತಿದ್ದು, ಕೇವಲ ಒಂದೇ ಒಂದು ಮಾಸ್ಕ್ ಮತ್ತು 50 ಮಿ.ಲೀಟರ್ ನ ಒಂದು ಸ್ಯಾನಿಟೈಸರ್ ನೀಡಿದ್ದಾರೆ, ಮುಖ ಸೀಲ್ ಮಾಡುವ ಮಾಸ್ಕ್ ನೀಡುವ ಭರವಸೆ ನೀಡಿದ್ದು ಎಲ್ಲರಿಗೂ ಅದು ತಲುಪಿಲ್ಲ ಎಂದು ದೂರಿದ್ದಾರೆ.

ಕಂಟೈನ್ ಮೆಂಟ್ ಜೋನ್ ನಲ್ಲಿ ದೈಹಿಕವಾಗಿ ದುರ್ಬಲರಾಗಿರುವವರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ.  ನಾವು ಕೇವಲ ಒಂದೇ ಒಂದು ಮಾಸ್ಕ್ ಹಾಕಿಕೊಂಡು ಸುತ್ತುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಅವರ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತ ಪಡಿಸಿದ್ದಾರೆ.

ನಮ್ಮ ಬಳಿ ಫೇಸ್ ಶೀಲ್ಡ್ ಮತ್ತು ಕೈ ಗವಸುಗಳಿಲ್ಲ, ನಮ್ಮ ಸಮಸ್ಯೆಗಳನ್ನು ಕೇಳಲು ಜಿಲ್ಲಾಡಳಿತಕ್ಕೆ ಆಸಕ್ತಿಯಿಲ್ಲ ಎಂದು ಆಶಾ ಕಾರ್ಯಕರ್ತೆಯೊಬ್ಬರು ಆರೋಪಿಸಿದ್ದಾರೆ.

ಮಾಸ್ಕ್ ಮತ್ತು ಸ್ಯಾನೀಟೈಸರ್ ಪೂರೈಸಲು ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆ, ಅವರು ಕೂಡ ಎನ್ ಜಿ ಓ ಗಳ ಮೇಲೆ ಅವಲಂಬಿತರಾಗಿದ್ದಾರೆ.  ನಾವು ಕೇವಲ ಒಂದು ಜೊತೆ ಕೈಗವಸು ನೀಡಿದ್ದಾರೆ. ನಾವು ಹೆಚ್ಚಿನವುಗಳನ್ನು ಕೇಳಿದರೇ ಅದನ್ನೇ ತೊಳೆದು ಉಪಯೋಗಿಸಿ ಎಂದು ಹೇಳುತ್ತಾರೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಶುಭ ಮಂಗಳ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT