ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತಪ್ಪನ್ನು ಒಪ್ಪಿಕೊಂಡಿದ್ದ ಇಬ್ಬರು ಆರೋಪಿಗಳಿಗೆ 8 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಅಹಮ್ಮದ್ ಜಮಾಲ್ ಮತ್ತು ಆಫ್ತಾಬ್ ಆಲಮ್ ಅಲಿಯಾಸ್ ಫಾರೂಕ್ ಅವರುಗಳಿಗೆ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ ಮಾತ್ರವಲ್ಲದೆ 4 ಲಕ್ಷ ರೂ. ದಂಡ ಸಹ ವಿಧಿಸಿದೆ.
ಸೋಮವಾರ ಈ ಇಬ್ಬರೂ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು ಮಂಗಳವಾರ ಶಿಕ್ಷೆ ಪ್ರಕಟವಾಗಿದೆ.
ವಿಶೇಷ ನ್ಯಾಯಾಲಯ ನ್ಯಾಯಾಧೀಶ ವೆಂಕಟೇಶ್ ಆರ್. ಹುಲಗಿ ಈ ತೀರ್ಪು ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ನಾಲ್ವರು ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ಅವರಿಗೆ ನ್ಯಾಯಾಲಯ ಏಳು ವರ್ಷ ಜೈಲುಶಿಕ್ಷೆ ವಿಧಿಸಿ 2018ರಲ್ಲಿ ತೀರ್ಪು ನೀಡಿತ್ತು. ಇದುವರೆಗೆ 6 ಆರೋಪಿಗಳಿಗೆ ಶಿಕ್ಷೆಯಾಗಿದ್ದು ಇನ್ನೂ ನಾಲ್ವರ ವಿರುದ್ಧ ಸಿಸಿಬಿ ತನಿಖೆ ನಡೆದಿದೆ.