ಕೊರೋನಾ ಸೋಂಕಿತರ ಶವಗಳ ವಿಲೇವಾರಿ ವಿಡಿಯೋ 
ರಾಜ್ಯ

ಬಳ್ಳಾರಿ: ಕೊರೋನಾ ಸೋಂಕಿತ ಮೃತದೇಹಗಳ ಸಾಮೂಹಿಕ ಅಂತ್ಯ ಸಂಸ್ಕಾರ ವೇಳೆ ಅಮಾನವೀಯತೆ; ವಿಡಿಯೋ ವೈರಲ್

ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ಸಂತ್ರಸ್ಥರ ಮೃತದೇಹಗಳ ಸಾಮೂಹಿಕ ಅಂತ್ಯ ಸಂಸ್ಕಾರ ವೇಳೆ ಅಮಾನವೀಯತೆ ಮೆರೆದಿರುವ ಘಟನೆ ಬಳ್ಳಾರಿಯಲ್ಲಿ ವರದಿಯಾಗಿದೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಹೊಸಪೇಟೆ: ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ಸಂತ್ರಸ್ಥರ ಮೃತದೇಹಗಳ ಸಾಮೂಹಿಕ ಅಂತ್ಯ ಸಂಸ್ಕಾರ ವೇಳೆ ಅಮಾನವೀಯತೆ ಮೆರೆದಿರುವ ಘಟನೆ ಬಳ್ಳಾರಿಯಲ್ಲಿ ವರದಿಯಾಗಿದೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಹೌದು..  ಬಳ್ಳಾರಿಯಲ್ಲಿ ನಿನ್ನೆ ಒಂದೇ ದಿನ ಕೊರೊನಾದಿಂದ 9 ಮಂದಿ ಸೋಂಕಿತರು ಮೃತ ಪಟ್ಟಿದ್ದರು. ಈ ಮದ್ಯೆ ನಿನ್ನೆ ಜಿಲ್ಲಾಡಳಿತ ಮೃತಪಟ್ಟವರ ಸಾಮೂಹಿಕ ಅಂತ್ಯ ಸಂಸ್ಕಾರ  ನೆರವೇರಿಸಿದೆ. ಈ ಸಂಬಂಧ ಶವಸಂಸ್ಕಾರದ ವಿಡಿಯೋ ಒಂದು ಹರಿದಾಡುತ್ತಿದ್ದು. ಮೃತದೇಹಗಳನ್ನು ಗುಂಡಿಯಲ್ಲಿ ಎಸೆಯುತ್ತಿರುವ ಭಯಾನಕ ದೃಶ್ಯಾವಳಿಗಳು ಎಂತಹವರನ್ನೂ ಬೆಚ್ಚಿ ಬೀಳಿಸುತ್ತವೆ. 

ಮನುಷ್ಯನ ಜೀವನ ಇಷ್ಟೇನಾ ಎನ್ನುವ ಭಾವನೆ ಬರುವಂತೆ ದೊಡ್ಡ ದೊಡ್ಡ ಗುಂಡಿಗಳಿಗೆ ಮೃತದೇಹಗಳನ್ನು ವಸ್ತುಗಳನ್ನು ಎಸೆಯುವಂತೆ ಎಸೆದಾಡಲಾದ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿವೆ. 

ಕೊರೊನಾ ಭೀತಿಯಿಂದ ಸಹ ಶಾವಸಂಸ್ಕಾರವನ್ನು ಹೀಗೆ ಅವಸರ ಅವಸರವಾಗಿ ಗುಂಡಿ ಬೀಸಾಡಿ ಹೋಗುತ್ತಿರುವ ವಿಡಿಯೋ ಇದೀಗ ಎಂಥವರ ಎದೆಯನ್ನೂ ಝಲ್ಲೆನಿಸುತ್ತಿವೆ. ಕನಿಷ್ಟಪಕ್ಷ ಶವಗಳಿಗೆ ಗೌರವ ಕೊಡದೆ ಗುಂಪಾಗಿ ಬಿಸಾಡುತ್ತಿರುವ ವಿಡಿಯೋ ಈಗ ವೈರಲ್ ಆಗುತ್ತಿರುವಂತೆಯೇ ಜನಸಾಮಾನ್ಯರು ಬಳ್ಳಾರಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT