ರಾಜ್ಯ

ಕೆ.ಆರ್.ಪೇಟೆ:  ಹುಚ್ಚು ನಾಯಿ ಕಡಿತ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

 ಹುಚ್ಚು ನಾಯಿಯೊಂದು ಓರ್ವ ಪುರಸಭಾ ನೌಕರ ಸೇರಿದಂತೆ ಸುಮಾರು ೧೦ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ವಿವಿಧ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.

ಮಂಡ್ಯ:  ಹುಚ್ಚು ನಾಯಿಯೊಂದು ಓರ್ವ ಪುರಸಭಾ ನೌಕರ ಸೇರಿದಂತೆ ಸುಮಾರು ೧೦ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ವಿವಿಧ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.

ಪಟ್ಟಣದ ಜಯನಗರ, ಮುಸ್ಲಿಂ ಬ್ಲಾಕ್, ತಮ್ಮಣ್ಣಗೌಡ ನಗರ, ಬಸವೇಶ್ವರನಗರ, ಪೊಲೀಸ್ ಠಾಣೆಯ ಮುಖ್ಯ ರಸ್ತೆ ಸೇರಿದಂತೆ ವಿವಿಧ ಭಾಗಗಳಲ್ಲಿ  ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದ ಹುಚ್ಚು ನಾಯಿಯೊಂದು ದಾರಿಯಲ್ಲಿ ಸಿಕ್ಕ ಪುರಸಭೆಯ ನೌಕರ ಶಶಿ, ಜಯನಗರ ಬಡಾವಣೆಯ ಸುಪ್ರಿಯ, ಹೆಮ್ಮನಹಳ್ಳಿಯ  ಪ್ರತಾಪ್ ಮತ್ತು ಗಗನ ಹಾಗೂ ನಾಲ್ಕು ಮಕ್ಕಳು ಸೇರಿದಂತೆ ೧೦ಕ್ಕೂ  ಮಂದಿಗೆ ಕಚ್ಚುವ ಮೂಲಕ ಗಂಭೀರವಾಗಿ ಗಾಯಗೊಳಿಸಿದೆ. 

ಗಾಯಾಳುಗಳೆಲ್ಲರೂ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಯನಗರ ಬಡಾವಣೆಯ ಸುಪ್ರಿಯ ಎಂಬುವವರಿಗೆ ಬಾಯಿಯ ಭಾಗಕ್ಕೆ ಕಚ್ಚುವ ಮೂಲಕ ಜನರಲ್ಲಿ ಆತಂಕದ ವಾತಾವರಣ ನಿರ್ಮಿಸಲಿರುವ ಹುಚ್ಚು ನಾಯಿಯನ್ನು ಹಿಡಿದು ಕೊಂದು ಹಾಕುವ ಮೂಲಕ ಜನರ ಪ್ರಾಣ ರಕ್ಷಣೆಗೆ  ಪುರಸಭೆಯ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಹಾಗೂ ಪುರಸಭೆಯ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ  ಬೀದಿ ನಾಯಿಗಳ ಹಾವಳಿಯು ಹೆಚ್ಚಾಗಿದೆ, ಹಿಂಡು ಹುಂಡಾಗಿ ಮುಖ್ಯ ರಸ್ತೆಗಳಲ್ಲಿಯೇ ಸುತ್ತಾಡುತ್ತಿವೆ ಹಾಗಾಗಿ ಕೂಡಲೇ ಬೀದಿ ನಾಯಿಗಳನ್ನು ಹಿಡಿಯಲು ಕಾರ್ಯಾಚರಣೆ ಹಮ್ಮಿಕೊಳ್ಳಬೇಕು  ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

ವರದಿ: ನಾಗಯ್ಯ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT