ಆತ್ಮಹತ್ಯೆ 
ರಾಜ್ಯ

ಕೊರೋನಾ ಸೋಂಕಿತನಿಂದ ಆತ್ಮಹತ್ಯೆ ಯತ್ನ: ಪೊಲೀಸರ ಮನವೊಲಿಕೆ ಬಳಿಕ ಆಸ್ಪತ್ರೆಗೆ ದಾಖಲು

ಕೋವಿಡ್‌-19 ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಿನ್ನೆ ನಡೆದಿದೆ.

ಮಂಗಳೂರು: ಕೋವಿಡ್‌-19 ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಿನ್ನೆ ನಡೆದಿದೆ.

ಉತ್ತರಾಖಂಡ್ ರಾಜ್ಯದ ಕೂಲಿಕಾರ್ಮಿಕನೋರ್ವ ನಗರದ ಹಂಪನಕಟ್ಟೆಯ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಹಲವು ದಿನಗಳಿಂದ ಕೆಲಸ ಮಾಡುತ್ತಿದ್ದ. ಈತನಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತನ ಗಂಟಲು ದ್ರವ ಮಾದರಿ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು.

ವಿಷಯ ತಿಳಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತನನ್ನು ಕರೆದೊಯ್ಯಲು ಆಗಮಿಸಿದ್ದರು. ಸೋಂಕಿತನನ್ನು ಆ್ಯಂಬುಲೆನ್ಸ್‌ಗೆ ಹತ್ತಿಸುವ ಸಂದರ್ಭದಲ್ಲಿ ಈತ ತಪ್ಪಿಸಿಕೊಂಡಿದ್ದಾನೆ. ಬಳಿಕ ಸೋಂಕಿತನು ನಗರದ ಟವರ್ ಕ್ಲಾಕ್ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ. ಈ ವೇಳೆ ಬಂದರ್ ಪೊಲೀಸರು ಆತನನ್ನು ಮನವೊಲಿಸಿ ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video