ಆತ್ಮಹತ್ಯೆ 
ರಾಜ್ಯ

ಕೊರೋನಾ ಸೋಂಕಿತನಿಂದ ಆತ್ಮಹತ್ಯೆ ಯತ್ನ: ಪೊಲೀಸರ ಮನವೊಲಿಕೆ ಬಳಿಕ ಆಸ್ಪತ್ರೆಗೆ ದಾಖಲು

ಕೋವಿಡ್‌-19 ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಿನ್ನೆ ನಡೆದಿದೆ.

ಮಂಗಳೂರು: ಕೋವಿಡ್‌-19 ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಿನ್ನೆ ನಡೆದಿದೆ.

ಉತ್ತರಾಖಂಡ್ ರಾಜ್ಯದ ಕೂಲಿಕಾರ್ಮಿಕನೋರ್ವ ನಗರದ ಹಂಪನಕಟ್ಟೆಯ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಹಲವು ದಿನಗಳಿಂದ ಕೆಲಸ ಮಾಡುತ್ತಿದ್ದ. ಈತನಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತನ ಗಂಟಲು ದ್ರವ ಮಾದರಿ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು.

ವಿಷಯ ತಿಳಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತನನ್ನು ಕರೆದೊಯ್ಯಲು ಆಗಮಿಸಿದ್ದರು. ಸೋಂಕಿತನನ್ನು ಆ್ಯಂಬುಲೆನ್ಸ್‌ಗೆ ಹತ್ತಿಸುವ ಸಂದರ್ಭದಲ್ಲಿ ಈತ ತಪ್ಪಿಸಿಕೊಂಡಿದ್ದಾನೆ. ಬಳಿಕ ಸೋಂಕಿತನು ನಗರದ ಟವರ್ ಕ್ಲಾಕ್ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ. ಈ ವೇಳೆ ಬಂದರ್ ಪೊಲೀಸರು ಆತನನ್ನು ಮನವೊಲಿಸಿ ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: 21 ಕೋಟಿಯಷ್ಟು ಹಣ ಮೃತಪಟ್ಟವರ ಖಾತೆಗೆ ಹೋಗಿದೆ; ಡಿಕೆ ಶಿವಕುಮಾರ್

SCROLL FOR NEXT