ಗೋಡೆ ಮೇಲಿನ ಬರಹ 
ರಾಜ್ಯ

ಬೆಂಗಳೂರು: ಗೋಡೆ ಮೇಲೆ ಫ್ರೀ ಕಾಶ್ಮೀರ ಬರಹ

ಇತ್ತೀಚೆಗಷ್ಟೇಅಮೂಲ್ಯಾ ಲಿಯೋನಾ ನಗರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಬೆನ್ನಲ್ಲೇ ಇಂದು ಶಿವಾಜಿನಗರದಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ

ಬೆಂಗಳೂರು: ಇತ್ತೀಚೆಗಷ್ಟೇಅಮೂಲ್ಯಾ ಲಿಯೋನಾ ನಗರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಬೆನ್ನಲ್ಲೇ ಇಂದು ಶಿವಾಜಿನಗರದಲ್ಲಿ ಮತ್ತೆ ಫ್ರೀ ಕಾಶ್ಮೀರ ಬರಹ ಪತ್ತೆಯಾಗಿದೆ

ಶಿವಾಜಿನಗರದ ಮೇಜರ್ ಸಂದೀಪ್ ಉನ್ನಿಕೃಷ್ಣನ್​ ಎನ್​ಕ್ಲೇವ್​ ಬಳಿ ಗೋಡೆ ಮೇಲೆ ಕಿಡಿಗೇಡಿಗಳು 'ಫ್ರೀ ಕಾಶ್ಮೀರ್​' ಸಿಎಎ ವಿರೋಧಿ ಬರಹದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಬರೆದು ಪರಾರಿಯಾಗಿದ್ದಾರೆ. ಗೋಡೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಬರೆಯಲಾಗಿದೆ. 

ಪ್ರಕರಣಕ್ಕೆ‌ ಸಂಬಂಧಿಸಿದಂತೆ ಪೂರ್ವ ವಿಭಾಗ ಡಿಸಿಪಿ ಶರಣಪ್ಪ ಪ್ರತಿಕ್ರಿಯಿಸಿ, ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ಷೇಪಾರ್ಹ ಬರಹ ಬರೆದಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದರು.

ಸದ್ಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲಾಗಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ. ಆಕ್ಷೇಪಾರ್ಹ ಬರಹಗಳನ್ನು ಬರೆದವರನ್ನು ಪತ್ತೆ ಹಚ್ಚಲು ಮುಂದಾಗಿದ್ದೇವೆ ಎಂದು ಹೇಳಿದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ ಅಮೂಲ್ಯ ಲಿಯೋನಾ ಎಂಬ ವಿದ್ಯಾರ್ಥಿನಿ 'ಪಾಕಿಸ್ತಾನ್​ ಜಿಂದಾಬಾದ್​' ಎಂದು ಘೋಷಣೆ ಕೂಗಿದ್ದಳು. ಬಳಿಕ ಆಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದಾದ ಬಳಿಕ ಟೌನ್​ಹಾಲ್​ ಬಳಿ ಆರ್ದ್ರಾ ಎಂಬ ಯುವತಿ 'ಫ್ರೀ ಕಾಶ್ಮೀರ್​' ಭಿತ್ತಿ ಪತ್ರ ಪ್ರದರ್ಶಿಸಿದ್ದಳು. ನಂತರ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT