ವಿರುಪಾಪುರ ಗಡ್ಡೆ 
ರಾಜ್ಯ

ಗಂಗಾವತಿ: ನಾಳೆ ವಿರುಪಾಪುರ ಗಡ್ಡೆಯಲ್ಲಿ ಅನಧಿಕೃತ ರೆಸಾರ್ಟ್ ತೆರವು, ನಿಷೇಧಾಜ್ಞೆ ಜಾರಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವಿದೇಶಿಗರ ಮೋಜುಮಸ್ತಿ ತಾಣ ವಿರುಪಾಪುರ ಗಡ್ಡೆಯಲ್ಲಿ ಬಹುತೇಕ ಎಲ್ಲಾ ಅನಧಿಕೃತ ರೆಸಾರ್ಟ್ ತೆರವು ಕಾರ್ಯಚರಣೆಗೆ ಮೂಹೂರ್ತ ಫಿಕ್ಸ್ ಆಗಿದೆ.

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವಿದೇಶಿಗರ ಮೋಜುಮಸ್ತಿ ತಾಣ ವಿರುಪಾಪುರ ಗಡ್ಡೆಯಲ್ಲಿ ಬಹುತೇಕ ಎಲ್ಲಾ ಅನಧಿಕೃತ ರೆಸಾರ್ಟ್ ತೆರವು ಕಾರ್ಯಚರಣೆಗೆ ಮೂಹೂರ್ತ ಫಿಕ್ಸ್ ಆಗಿದೆ.

ಈ ಬಗ್ಗೆ ಗಂಗಾವತಿ ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ್ ಅಧಿಕೃತ ಆರೋಗ್ಯ, ವಿದ್ಯುತ್ ಹಾಗೂ ಪೊಲೀಸ್ ಇಲಾಖೆಗೆ ಪತ್ರ ಬರೆದು ಸಿಬ್ಬಂದಿ ಒದಗಿಸುವಂತೆ ಕೋರಿದ್ದಾರೆ.

ನಾಳೆ ಬೆಳಗ್ಗೆ ಐದು ಗಂಟೆಗೆ ಗಡ್ಡಿಯಲ್ಲಿ ಸುಪ್ರಿಂ ಕೋರ್ಟ್ ನಿರ್ದೇಶನದ‌ ಮೆರೆಗೆ ತೆರವು ಕಾರ್ಯ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಅನಧಿಕೃತ ರೆಸಾರ್ಟ್ ಗಳ ತೆರವು ಕಾರ್ಯಚರಣೆ ನಡೆಸುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ‌ ನಡೆಯದಂತೆ ಮುಂಜಾಗ್ರತೆ ವಹಿಸಲು ವಿದೇಶಿ ಪ್ರವಾಸಿಗರ ತಾಣದಲ್ಲಿ ನಿಷೆಧಾಜ್ಞೆ ಜಾರಿ ಮಾಡಲಾಗಿದೆ.

ತಹಸೀಲ್ದಾರ್ ಚಂದ್ರಕಾಂತ್, ತಮಗೆ ದತ್ತವಾದ ಅಧಿಕಾರ ಚಲಾಯಿಸಿ ಬೆಳಗ್ಗೆ ನಾಲ್ಕು ಗಂಟೆಯಿಂದ ರಾತ್ರಿ ಹತ್ತು ಗಂಟೆವರೆಗೂ ವಿರುಪಾಪುರ ಗಡ್ಡಿ ಹಾಗೂ ಸುತ್ತಲೂ ಎರಡು ಕಿ.ಮೀ ಸಾರ್ವಜನಿಕ ಓಡಾಟ ನಿಷೇಧಿಸಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ತೆರವು ಕಾರ್ಯಚರಣೆ‌ ನಡೆಸುವ ಸಂದರ್ಭದಲ್ಲಿ  ಕೆಲವರು ಉದ್ದೇಶ ಪೂರ್ವಕವಾಗಿ ತಡೆಗಟ್ಟಲು ಯತ್ನಿಸಿದ ಘಟನೆ ನಡೆದಿವೆ. ಆತ್ಮಹತ್ಯೆಯಂಥ ಘಟನೆಗೂ ಕೆಲವರು ಯತ್ನಿಸಿದ ಹಿನ್ನೆಲೆ ಅದೇ ಮಾದರಿಯ ಯತ್ನಗಳು ಮತ್ತೆ ನಡೆಯುತ್ತವೆ ಎಂಬ ಮಾಹಿತಿ ಮೇರೆಗೆ ತಹಸೀಲ್ದಾರ್ ಈ ಕ್ರಮಕ್ಕೆ ಮುಂದಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT