ವಿರುಪಾಪುರ ಗಡ್ಡೆ 
ರಾಜ್ಯ

ಗಂಗಾವತಿ: ನಾಳೆ ವಿರುಪಾಪುರ ಗಡ್ಡೆಯಲ್ಲಿ ಅನಧಿಕೃತ ರೆಸಾರ್ಟ್ ತೆರವು, ನಿಷೇಧಾಜ್ಞೆ ಜಾರಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವಿದೇಶಿಗರ ಮೋಜುಮಸ್ತಿ ತಾಣ ವಿರುಪಾಪುರ ಗಡ್ಡೆಯಲ್ಲಿ ಬಹುತೇಕ ಎಲ್ಲಾ ಅನಧಿಕೃತ ರೆಸಾರ್ಟ್ ತೆರವು ಕಾರ್ಯಚರಣೆಗೆ ಮೂಹೂರ್ತ ಫಿಕ್ಸ್ ಆಗಿದೆ.

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವಿದೇಶಿಗರ ಮೋಜುಮಸ್ತಿ ತಾಣ ವಿರುಪಾಪುರ ಗಡ್ಡೆಯಲ್ಲಿ ಬಹುತೇಕ ಎಲ್ಲಾ ಅನಧಿಕೃತ ರೆಸಾರ್ಟ್ ತೆರವು ಕಾರ್ಯಚರಣೆಗೆ ಮೂಹೂರ್ತ ಫಿಕ್ಸ್ ಆಗಿದೆ.

ಈ ಬಗ್ಗೆ ಗಂಗಾವತಿ ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ್ ಅಧಿಕೃತ ಆರೋಗ್ಯ, ವಿದ್ಯುತ್ ಹಾಗೂ ಪೊಲೀಸ್ ಇಲಾಖೆಗೆ ಪತ್ರ ಬರೆದು ಸಿಬ್ಬಂದಿ ಒದಗಿಸುವಂತೆ ಕೋರಿದ್ದಾರೆ.

ನಾಳೆ ಬೆಳಗ್ಗೆ ಐದು ಗಂಟೆಗೆ ಗಡ್ಡಿಯಲ್ಲಿ ಸುಪ್ರಿಂ ಕೋರ್ಟ್ ನಿರ್ದೇಶನದ‌ ಮೆರೆಗೆ ತೆರವು ಕಾರ್ಯ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಅನಧಿಕೃತ ರೆಸಾರ್ಟ್ ಗಳ ತೆರವು ಕಾರ್ಯಚರಣೆ ನಡೆಸುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ‌ ನಡೆಯದಂತೆ ಮುಂಜಾಗ್ರತೆ ವಹಿಸಲು ವಿದೇಶಿ ಪ್ರವಾಸಿಗರ ತಾಣದಲ್ಲಿ ನಿಷೆಧಾಜ್ಞೆ ಜಾರಿ ಮಾಡಲಾಗಿದೆ.

ತಹಸೀಲ್ದಾರ್ ಚಂದ್ರಕಾಂತ್, ತಮಗೆ ದತ್ತವಾದ ಅಧಿಕಾರ ಚಲಾಯಿಸಿ ಬೆಳಗ್ಗೆ ನಾಲ್ಕು ಗಂಟೆಯಿಂದ ರಾತ್ರಿ ಹತ್ತು ಗಂಟೆವರೆಗೂ ವಿರುಪಾಪುರ ಗಡ್ಡಿ ಹಾಗೂ ಸುತ್ತಲೂ ಎರಡು ಕಿ.ಮೀ ಸಾರ್ವಜನಿಕ ಓಡಾಟ ನಿಷೇಧಿಸಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ತೆರವು ಕಾರ್ಯಚರಣೆ‌ ನಡೆಸುವ ಸಂದರ್ಭದಲ್ಲಿ  ಕೆಲವರು ಉದ್ದೇಶ ಪೂರ್ವಕವಾಗಿ ತಡೆಗಟ್ಟಲು ಯತ್ನಿಸಿದ ಘಟನೆ ನಡೆದಿವೆ. ಆತ್ಮಹತ್ಯೆಯಂಥ ಘಟನೆಗೂ ಕೆಲವರು ಯತ್ನಿಸಿದ ಹಿನ್ನೆಲೆ ಅದೇ ಮಾದರಿಯ ಯತ್ನಗಳು ಮತ್ತೆ ನಡೆಯುತ್ತವೆ ಎಂಬ ಮಾಹಿತಿ ಮೇರೆಗೆ ತಹಸೀಲ್ದಾರ್ ಈ ಕ್ರಮಕ್ಕೆ ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!