ಸಂಗ್ರಹ ಚಿತ್ರ 
ರಾಜ್ಯ

30 ತಿಂಗಳ ಮಗುವನ್ನು ಹತ್ಯೆ ಮಾಡಿದ್ದ ಚಿರತೆಗೆ ಗುಂಡಿಕ್ಕಿ ಕೊಲ್ಲಿ: ಸಚಿವರ ಆದೇಶ

ಮನೆಯ ಮುಂದೆ ಆಟವಾಡುತ್ತಿದ್ದ 30 ತಿಂಗಳ ಮಗುವನ್ನು ಹತ್ಯೆ ಮಾಡಿದ ಚಿರತೆಯನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವಂತೆ ರಾಜ್ಯ ಅರಣ್ಯ ಸಚಿವ ಆನಂದ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ 30 ತಿಂಗಳ ಮಗುವನ್ನು ಹತ್ಯೆ ಮಾಡಿದ ಚಿರತೆಯನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವಂತೆ ರಾಜ್ಯ ಅರಣ್ಯ ಸಚಿವ ಆನಂದ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಬಿಚೇನಹಳ್ಳಿಗೆ ಭೇಟಿ ನೀಡಿ ಮಗುವಿನ ಪೋಷಕರೊಂದಿಗೆ ಸಮಾಧಾನ ಮಾಡಿದರು. ಜೊತೆಗೆ, ಸೂಕ್ತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ನಂತರ, ಸುದ್ದಿಗಾರರೊಂದಿಗೆ ಮಾತನಾಡಿ ಸೋಮವಾರದಿಂದ ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಆರಂಭವಾಗಲಿದೆ ಎಂದರು. ಚಿರತೆದಾಳಿಗೊಳಗಾಗಿ ಮೃತಪಟ್ಟ 3 ವರ್ಷದ ಮಗು ಚಂದನಾ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಕೊಡಿಸುವುದಾಗಿ ಘೋಷಣೆ ಮಾಡಿದ್ದಾರೆ.

ಮಗು ಕಳೆದುಕೊಂಡಿರುವ ಪೋಷಕರ ನೋವು ನನಗೆ ಅರ್ಥವಾಗುತ್ತದೆ. ಆದರೆ, ಮತ್ತೆ ಮಗುವನ್ನು ತಂಡು ಕೊಡುವ ಶಕ್ತಿ ನಮಗ್ಯಾರಿಗೂ ಇಲ್ಲ. ಮಗುವಿನ ಕುಟುಂಬಕ್ಕೆ ಸರ್ಕಾರದಿಂದ ರೂ.10 ಲಕ್ಷ ಪರಿಹಾರ ಕೊಡಿಸುವುದಾಗಿ ತಿಳಿಸಿದರು. ಜೊತೆಗೆ ಮಗು ಕಳೆದುಕೊಂಡಿರುವ ದಂಪತಿಗೆ 5 ವರ್ಷ ಅರಣ್ಯ ಇಲಾಖೆ ವತಿಯಿಂದ ರೂ.2 ಸಾವಿರ ಮಾಸಾಶನ ನೀಡಲು ಆದೇಶಿಸಿದರು. 

ತುಮಕೂರು, ಕುಣಿಗಲ್ ಹಾಗೂ ಗುಬ್ಬಿ ತಾಲೂಕಿನ ಜನರನ್ನು ಬೆಚ್ಚಿ ಬೀಳಿಸಿ ನಾಲ್ವರನ್ನು ಬಲಿ ತೆಗೆದುಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವಂತೆ  ಸಾರ್ವಜನಿಕರು ನಿರಂತರ ಒತ್ತಾಯಿಸಿದ್ದರೂ ಮೀನ ಮೇಷ ಎಣಿಸುತ್ತಿದ್ದ ಸರ್ಕಾರ ಮಗುವಿನ ಸಾವಿನ ಬಳಿಕ ಎಚ್ಚೆತ್ತುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ 'PPP' ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

ಬೆಂಗಳೂರಿನ ಮೂಲಸೌಕರ್ಯ ಬಗ್ಗೆ ಟೀಕೆ: ನಾವು ಹೇಗಿದ್ವಿ, ಹೇಗಾದ್ವಿ? ಅನ್ನೋದನ್ನ ಮರೆತು ಮಾತಡ್ತಾರೆ; ಉದ್ಯಮಿ ಗಳಿಗೆ ಡಿಕೆಶಿ ಟಾಂಗ್!

ಬಿಜೆಪಿ ವಿರುದ್ಧ ‘ವೋಟ್ ಚೋರ್ ಗದ್ದಿ ಚೋಡ್ ’: ಪ್ರತಿ ಕ್ಷೇತ್ರದಲ್ಲಿ 2 ಲಕ್ಷ ಸಹಿ ಸಂಗ್ರಹಿಸಲು ಶಿವಕುಮಾರ್ ಟಾರ್ಗೆಟ್!

PAK vs SA: ಸ್ಪಾಟ್ ಫಿಕ್ಸಿಂಗ್ ನಿಂದ ಬ್ಯಾನ್ ಆಗಿದ್ದ ಆಟಗಾರನಿಗೆ ಮತ್ತೆ ಮಣೆ, 38ನೇ ವಯಸ್ಸಿನಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ!

ಇಬ್ಬರು ಗಂಡು ಮಕ್ಕಳಿದ್ದರೂ 'ಸೋದರಳಿಯ'ನೊಂದಿಗೆ ಚಕ್ಕಂದ: ಪೊಲೀಸರನ್ನು ಬೆಚ್ಚಿ ಬೀಳಿಸಿದ ಮಹಿಳೆ, ಮಾಡಿದ್ದೇನು ಗೊತ್ತಾ?

SCROLL FOR NEXT