ಅಕ್ರಮ ರೆಸಾರ್ಟ್ ಗಳ ತೆರವು 
ರಾಜ್ಯ

ಗಂಗಾವತಿ: ನಿಷೇಧಾಜ್ಞೆ ಮಧ್ಯೆ ಅಕ್ರಮ ರೆಸಾರ್ಟ್ ತೆರವು ಕಾರ್ಯಚರಣೆ

ಸುಪ್ರಿಂ ಕೋರ್ಟ್‌ ನಿರ್ದೇಶನದ‌ ಮೆರೆಗೆ ತಾಲ್ಲೂಕಿನ ವಿರುಪಾಪುರ ಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್ ತೆರವು ಕಾರ್ಯಚರಣೆ ಇಂದು ಬೆಳ್ಳಂಬೆಳಗ್ಗೆ ಆರಂಭವಾಯಿತು.

ಗಂಗಾವತಿ: ಸುಪ್ರಿಂ ಕೋರ್ಟ್‌ ನಿರ್ದೇಶನದ‌ ಮೆರೆಗೆ ತಾಲ್ಲೂಕಿನ ವಿರುಪಾಪುರ ಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್ ತೆರವು ಕಾರ್ಯಚರಣೆ ಇಂದು ಬೆಳ್ಳಂಬೆಳಗ್ಗೆ ಆರಂಭವಾಯಿತು.

ಸುಮಾರು 200ಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲಿನಲ್ಲಿ ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ್ ನೇತೃತ್ವದಲ್ಲಿ ತೆರವು ಕಾರ್ಯಚರಣೆ ಆರಂಭವಾಯಿತು. ಬೆಳಗ್ಗೆ ಮೂರು ಗಂಟೆಯಿಂದಲೇ ಕಂದಾಯ, ಪೊಲೀಸ್, ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ನಾನಾ ಇಲಾಖೆಗಳ ಸಿಬ್ಬಂದಿ ಗಡ್ಡಿಗೆ ಆಗಮಿಸಿದರು. 

ಎಲ್ಲಾ ಸಿದ್ಧತೆಗಳನ್ನು‌ ಮಾಡಿಕೊಂಡು ಬೆಳಗ್ಗೆ ಏಳು ಗಂಟೆಯಿಂದಲೇ ತೆರವು  ಕಾರ್ಯಚರಣೆ ಆರಂಭವಾಯಿತು. ಮೇಲು ಉಸ್ತುವಾರಿ ವಹಿಸಿಕೊಂಡಿದ್ದ  ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಅಧೀನ ಅಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು. ಮೂರು ದಿನಕಾಲ ತೆರವು ಕಾರ್ಯಚರಣೆ ಮುಂದುವರೆಯಲಿದೆ. ಆದರೆ ಸುಪ್ರಿಂ ಕೋರ್ಟ್ ಜ.24ರಂದು ಮಾಡಿದ್ದ ಆದೇಶದ ‌ಹಿನ್ನೆಲೆ ಈಗಾಗಲೆ ಗಡ್ಡಿಯಲ್ಲಿ ಶೇ.40ರಷ್ಟು ಹೊಟೇಲ್‌ ಮಾಲಿಕರು ಸ್ವಯಂ ಪ್ರೇರಣೆಯಿಂದ ತೆರವು ಮಾಡಿಕೊಂಡಿದ್ದರು. ಇನ್ನುಳಿದ ಹೊಟೇಲ್ ಗಳ ತೆರವು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT