ಪ್ರಭು ಚವ್ಹಾಣ್ 
ರಾಜ್ಯ

ಕೋಳಿ ಮಾಂಸ, ಮೊಟ್ಟೆ ಸುರಕ್ಷಿತ: ಕರೋನ ಭೀತಿ ಬೇಡ ಎಂದ ಸಚಿವರು

ಇತ್ತೀಚೆಗೆ ಚೀನಾ ದೇಶದಲ್ಲಿ ಕಾಣಿಸಿಕೊಂಡಿರುವ ಕರೋನ ವೈರಸ್(COVID2019) ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿ/ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಬೆಂಗಳೂರು: ಇತ್ತೀಚೆಗೆ ಚೀನಾ ದೇಶದಲ್ಲಿ ಕಾಣಿಸಿಕೊಂಡಿರುವ ಕರೋನ ವೈರಸ್(COVID2019) ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿ/ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವದಂತಿಗೆ ಯಾವುದೇ ವೈಜ್ಞಾನಿಕ ಆಧಾರ ಇರುವುದಿಲ್ಲ.
  
ನಮ್ಮ ದೇಶದಲ್ಲಿ ಕೋಳಿಗಳಿಗೆ ಕರೋನ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ ಹಾಗೂ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸೋಂಕು ಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುತ್ತದೆ ಎಂದು ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಸ್ಪಷ್ಟ ಪಡಿಸಿದ್ದಾರೆ.
  
ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯಿಂದಾಗಿ ಕುಕ್ಕಟ ಉದ್ಯಮಕ್ಕೆ ಪೆಟ್ಟು ಬೀಳುತ್ತಿದೆ. ಸಾಮಾನ್ಯವಾಗಿ ಕೋಳಿ ಮಾಂಸ ವನ್ನು ೧೦೦ ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿಯಲು ಸಾಧ್ಯವಿಲ. ಆದ್ದರಿಂದ, ಸಾರ್ವಜನಿಕರು ಕರೋನಾ ವೈರಾಣು ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಕೊಡಬಾರದು.
  
ಈ ರೀತಿಯ ವಂದತಿಗಳನ್ನು ಹರಡುವುದರಿಂದ ಸಾರ್ವಜನಿಕರಿಗೆ ಉತ್ತಮ ಪೌಷ್ಟಿಕಾಂಶ ನೀಡುವ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಯಿಂದ ದೊರಕುವ ಪೋಷಕಾಂಶಗಳ ಕೊರತೆ ಎದುರಾಗುತ್ತದೆ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಬಾಣಂತಿ ಯರು ಪೋಷಕಾಂಶ ಕೊರತೆಯಿಂದ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ವದಂತಿಗಳು ಸಾಮಾಜಿಕ ಆಹಾರ ಸ್ವಾಸ್ಥ್ಯವನ್ನು ಮತ್ತಷ್ಟು ಹದಗೆಡಿಸುತ್ತವೆ.
  
ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಕೋಳಿ ಮಾಂಸ ಮತ್ತು ಮೊಟ್ಟೆ ದೇಹಕ್ಕೆ ಉತ್ತಮ ಪ್ರೋಟೀನ್ ಪೂರೈಸುವ ಆಹಾರವಾಗಿವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾರೂ ಇಂತಹ ವದಂತಿಗಳನ್ನು ಹರಡಬಾರದು ಎಂದು ಈ ಮೂಲಕ ಮನವಿ ಮಾಡಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT