ಪ್ರಧಾನಮಂತ್ರಿ ನರೇಂದ್ರ ಮೋದಿ 
ರಾಜ್ಯ

ಸಾಮಾಜಿಕ ಜಾಲತಾಣಕ್ಕೆ ಮೋದಿ ವಿದಾಯ: ಟ್ವಿಟರ್ ಶುರುವಾಯ್ತು 'ನೋ ಸರ್' ಟ್ರೆಂಡ್

ಸಾಮಾಜಿಕ ಜಾಲತಾಣಗಳ ಮೂಲಕವೇ ದೇಶದಾದ್ಯಂತ ಜನರನ್ನು ತಲುಪುವ ಮೂಲ ಜನಪ್ರಿಯರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಸಾಮಾಜಿಕ ಜಾಲತಾಣಗಳಿಗೆ ವಿದಾಯ ಹೇಳುವ ಘೋಷಣೆ ಮಾಡಿದ್ದು, ಮೋದಿಯವರು ಈ ನರ್ಧಾರ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ನವದೆಹಲಿ: ಸಾಮಾಜಿಕ ಜಾಲತಾಣಗಳ ಮೂಲಕವೇ ದೇಶದಾದ್ಯಂತ ಜನರನ್ನು ತಲುಪುವ ಮೂಲ ಜನಪ್ರಿಯರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಸಾಮಾಜಿಕ ಜಾಲತಾಣಗಳಿಗೆ ವಿದಾಯ ಹೇಳುವ ಘೋಷಣೆ ಮಾಡಿದ್ದು, ಮೋದಿಯವರು ಈ ನರ್ಧಾರ ಭಾರೀ ಕುತೂಹಲಕ್ಕೆ ಕಾರಣವಾಗಿದೆ. 

ನಾನು ಎಲ್ಲಾ ಸಾಮಾಜಿಕ ಜಾಲತಾಣಗಳಿಂದ ಹೊರಬರುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಹೇಳಿ ಅವರು ಮಾಡಿರುವ ಟ್ವೀಟ್ ಇದೀಗ ನಾನಾ ಅನುಮಾನಗಳಿಗೆ ಕಾರಣವಾಗಿದೆ. 

ಭಾನುವಾರವಷ್ಟೇ ಟ್ವೀಟ್ ಮಾಡಿದ್ದ ಮೋದಿಯವರು ನಾನು ನನ್ನ ಫೇಸ್ ಬುಕ್, ಟ್ವಿಟರ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಗೆ ವಿದಾಯ ಹೇಳುವ ಬಗ್ಗೆ ಚಿಂತಿಸುತ್ತಿದ್ದೇನೆ. ಈ ಬಗ್ಗೆ ಮತ್ತೆ ನಾನು ನಿಮಗೆ ತಿಳಿಸುತ್ತೇನೆಂದು ಹೇಳಿದ್ದರು. ಈ ಟ್ವೀಟ್ ಇದೀಗ ಭಾರೀ ವೈರಲ್ ಆಗುತ್ತಿದೆ. ಜೊತೆಗೆ ಈ ಟ್ವೀಟ್ ನ ಅರ್ಥ ಏನು ಎಂಬ ವಿಶ್ಲೇಷಣಗಳೂ ಭಾರೀ ಪ್ರಮಾಣದಲ್ಲಿ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಕೋಟ್ಯಾಂತರ ಅಭಿಮಾನಿಗಳು, ಹಿಂಬಾಲಕರನ್ನು ಹೊಂದಿರುವ ಮೋದಿ ನಿಜವಾಗಿಯೂ ಹೊರಹೋಗುತ್ತಾರಾ? ಅಥವಾ ಬೇರಾನಾದರೂ ನಿಗೂಢ ಅರ್ಥ ಇದೆಯಾ ಎಂಬ ಕುತೂಹಲ ಮೂಡತೊಡಗಿದೆ. 

ಸಾಮಾಜಿಕ ಜಾಲತಾಣಕ್ಕೆ ಮೋದಿಯವರು ವಿದಾಯ ಹೇಳುವ ಘೋಷಣೆ ಮಾಡುತ್ತಿದ್ದಂತೆಯೇ ಇದೀಗ ಟ್ವಿಟರ್ ನಲ್ಲಿ ನೋ ಸರ್ ಎಂಬ ಹೊಸ ಟ್ರೆಂಡ್ ಶುರುವಾಗಿದೆ. ಸುಮಾರು 26,000ಕ್ಕೂ ಹೆಚ್ಚು ಮಂದಿ ರೀಟ್ವೀಟ್ ಮಾಡಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. 

ವಿಶ್ವದೆಲ್ಲೆಡೆ ಇರುವ ಸಾಕಷ್ಟು ಜನರು ನಿಮ್ಮನ್ನು ಪ್ರೀತಿಸುತ್ತಾರೆ. ಲವ್ ಯು ಸೋ ಮಚ್ ಮೋದಿ ಜೀ. ನಿಮಗೆ ಬೇಕೆನಿಸದರೆ, ಕೆಲ ಕಾಲ ಸಾಮಾಜಿಕ ಜಾಲತಾಣಗಳಿಂದ ಬ್ರೇಕ್ ತೆಗೆದುಕೊಳ್ಳಿ. ಆದರೆ, ವಿದಾಯ ಹೇಳಬೇಡಿ ನಿಮಗೆ ಮನವಿ ಮಾಡಿಕೊಳ್ಳುತ್ತಿದ್ದೇವೆ, #ನೋಸರ್ ಎಂದು ಜನರು ಟ್ವೀಟ್ ಮಾಡುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT