ದೊರೆಸ್ವಾಮಿ 
ರಾಜ್ಯ

ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದರೆ ಪೆನ್ಶನ್ ಯಾಕೆ?

ಎಚ್.ಎಸ್.ದೊರೆಸ್ವಾಮಿ ಸ್ವಾತಂತ್ರ್ಯ ಹೋರಾ ಟಗಾರರಲ್ಲ ಎಂದರೇ ಮತ್ಯಾಕೆ ಪಿಂಚಣಿ ಕೊಡ್ತಿದ್ದೀರಿ? ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬೆಂಗಳೂರು: ಎಚ್.ಎಸ್.ದೊರೆಸ್ವಾಮಿ ಸ್ವಾತಂತ್ರ್ಯ ಹೋರಾ ಟಗಾರರಲ್ಲ ಎಂದರೇ ಮತ್ಯಾಕೆ ಪಿಂಚಣಿ ಕೊಡ್ತಿದ್ದೀರಿ? ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಯಾಕೆ ಅವರನ್ನು ಕ್ರಿಮಿನಲ್ ರೀತಿ ನಡೆಸಿ ಕೊಳ್ತಿದ್ದೀರಿ. ಯಾರಿಗೆ ಎಷ್ಟು ಗೌರವ ಕೊಡಬೇಕೋ ಅಷ್ಟು ಗೌರವ ಕೊಡಬೇಕು. 

ದೊರೆಸ್ವಾಮಿ ಅವರನ್ನು ಕ್ರಿಮಿನಲ್ ರೀತಿ ಬಿಂಬಿಸಲು ಮುಂದಾಗಿರುವುದು ಸರಿಯಲ್ಲ. ಅವರ ಸೇವೆ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಪ್ರತಿಯೊಬ್ಬರು ಸ್ಮರಿಸಬೇಕು. ಬರೀ ಯತ್ನಾಳ್ ಹೇಳಿಕೆ ಮಾತ್ರವಲ್ಲ, ಇಡೀ ಬಿಜೆಪಿಗರು ಅವರ ಹೇಳಿಕೆ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ನಮ್ಮನ್ನು ಬೆಂಬಲಿಸುವರು ಮಾತ್ರ ಒಳ್ಳೆಯವರು ಎನ್ನುವುದು ಸರಿಯಲ್ಲ. ಅಲ್ಲದೆ, ದೊರೆಸ್ವಾಮಿ ಅವರಂತಹ ವ್ಯಕ್ತಿಗಳು ಹೋರಾಟ ಮಾಡಿದ ಕಾರಣದಿಂದಲೇ ನಾವು ಇಂದು ಶಾಸಕರಾಗಿ ಸದನದೊಳಗೆ ಇದ್ದೇವೆ ಎಂದು ಅವರು ಹೇಳಿದರು

ನನಗೂ 59 ವರ್ಷ ಆಯ್ತು ಈಗ, ಕೆಲವು ಮೆಂಟಲ್ ಕೇಸ್ ಗಳು ಏನೇ ನೋ ಮಾತಾಡ್ತಾರೆ ಬಿಡಿ, ಮಾತಾಡಲಿ. ಮಾತಾಡಿ ದವರ ವಿರುದ್ಧ ಮೂರ್ನಾಲ್ಕು ಕೋಟಿ ಕೇಸ್ ಹಾಕಿದಿನಿ. ನೋಡಿ ರಾಜಕಾರಣದಲ್ಲಿ ಹೀರೋಗಳೆಲ್ಲ ಝಿರೋ ಆಗ್ತಾರೆ, ಝಿರೋಗಳೆಲ್ಲ ಹೀರೋ ಆಗ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT