ರಾಜ್ಯ

ಕಲಬುರಗಿ: ಮೀನು ಹಿಡಿಯಲು ಹೋದ ಸಹೋದರರಿಬ್ಬರು ನೀರು ಪಾಲು

Raghavendra Adiga

ಕಲಬುರಗಿ:  ಮೀನು ಹಿಡಿಯಲು ತೆರಳಿದ್ದ ಸಹೋದರರಿಬ್ಬರು ನೀರು ಪಾಲಾಗಿರುವ ದುರ್ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ನಡೆದಿದೆ.

25 ವರ್ಷದ ಬಸಣ್ಣ, ನಾಗಣ್ಣ (18) ಮೃತ ಸಹೋದರರು. ಮೃತರು ಜೇವರ್ಗಿ ತಾಲೂಕಿನ ಹರನೂರು ಗ್ರಾಮದವರು ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕೆರೆಯಿಂದ ಎರಡೂ ಶವಗಳನ್ನು ಹೊರ ತೆಗೆದಿದ್ದಾರೆ.

ಘಟನೆ ಸಂಬಂಧ ಜೇವರ್ಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

SCROLL FOR NEXT