ಹುಬ್ಬಳ್ಳಿ-ಅಂಕೋಲಾ ರೈಲ್ವೆ ಲೈನ್ ಗೆ ಗ್ರೀನ್ ಸಿಗ್ನಲ್; ವನ್ಯಜೀವಿ ಮಂಡಳಿ, ಅರಣ್ಯ ಅಧಿಕಾರಿಗಳಿಂದ ವಿರೋಧ! 
ರಾಜ್ಯ

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಲೈನ್ ಗೆ ಗ್ರೀನ್ ಸಿಗ್ನಲ್: ವನ್ಯಜೀವಿ ಮಂಡಳಿ, ಅರಣ್ಯ ಅಧಿಕಾರಿಗಳಿಂದ ವಿರೋಧ! 

ಹುಬ್ಬಳ್ಳಿ-ಅಂಕೋಲಾ ಮಾರ್ಗದ ರೈಲ್ವೆ ಲೈನ್ ಗೆ ಒಂದೆಂಡೆ ಗ್ರೀನ್ ಸಿಗ್ನಲ್ ದೊರೆತಿದ್ದರೆ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ, ವನ್ಯಜೀವಿ ಸಂರಕ್ಷಣಾವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಲೈನ್ ಗೆ ಒಂದೆಂಡೆ ಗ್ರೀನ್ ಸಿಗ್ನಲ್ ದೊರೆತಿದ್ದರೆ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ, ವನ್ಯಜೀವಿ ಸಂರಕ್ಷಣಾವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಮುಂದಿನ ವಾರ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ 13 ನೇ ಸಭೆ ನಿಗದಿಯಾಗಿದ್ದು, ಈ ನಡುವೆ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಲೈನ್ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ವನ್ಯಜೀವಿ ಸಂರಕ್ಷಣಾವಾದಿಗಳು ಅರಣ್ಯ ಅಧಿಕಾರಿಗಳು ತೀವ್ರ ಆತಂಕ, ವಿರೋಧ ವ್ಯಕ್ತಪಡಿಸಿದ್ದಾರೆ. 

ಯೋಜನೆಯನ್ನು ರಾಜ್ಯ ಹಾಗೂ ಕೇಂದ್ರಗಳ ವಿವಿಧ ಅಧಿಕಾರಿಗಳು ತಿರಸ್ಕರಿಸಿದ್ದರೂ ಸಹ ಪುನಃ ಪ್ರಸ್ತಾವನೆ ಜೀವ ಪಡೆದುಕೊಂಡಿದೆ.  20 ವರ್ಷಗಳಷ್ಟು ಹಳೆಯ ಯೋಜನೆಯಾಗಿರುವ ಹುಬ್ಬಳ್ಳಿ-ಅಂಕೋಲ ರೈಲ್ವೆ ಲೈನ್ ಯೋಜನೆಗಾಗಿ ಕಾರವಾರ, ಯೆಲ್ಲಾಪುರ, ಧಾರವಾಡದಲ್ಲಿ ಬರೊಬ್ಬರಿ 2.2 ಲಕ್ಷ ಮರಗಳನ್ನು ಕತ್ತರಿಸಬೇಕಾಗುತ್ತದೆ. ರೈಲ್ವೆ ಮಾರ್ಗ ಹಾದು ಹೋಗುವ ಕಾಡಿನ ಪ್ರದೇಶ ಪರಿಸರದ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿದ್ದು, ಅಳಿವಿನಂಚಿನಲ್ಲಿರುವ ಸಸ್ಯ ಮತ್ತು ಪ್ರಾಣಿ ಸಂಕುಲದಿಂದ ಕೂಡಿದೆ. ಯೋಜನೆಗೆ ಅನುಮೋದನೆ ದೊರೆತು ಪ್ರಾರಂಭವಾಗಿದ್ದೇ ಆದಲ್ಲಿ, ಈ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಸಂಚಕಾರ ಬರುವುದರ ಜೊತೆಗೆ ಕಾಳಿ ಕಣಿವೆಯಲ್ಲಿರುವ ನದಿಗಳ ಸಹಜ ಹರಿವಿನ ಮೇಲೂ ಪರಿಣಾಮ ಬೀರಲಿದೆ. ಈ ಮೂಲಕ ಕರ್ನಾಟಕದ ಸ್ವಾಭಾವಿಕ ಪರಿಸರ ವ್ಯವಸ್ಥೆಗೆ ಧಕ್ಕೆಯಾಗಲಿದ್ದು, ಹವಾಮಾನ ಬದಲಾವಣೆಗೂ ಕಾರಣವಾಗಲಿದೆ ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.

ಯೋಜನೆಯನ್ನು ವಿರೋಧಿಸುವವರ ಪೈಕಿ ಮುಂಚೂಣಿಯಲ್ಲಿರುವ ಮಾಜಿ ಮುಖ್ಯ ವನ್ಯಜೀವಿ ವಾರ್ಡನ್ ಕಾಳಿ ಹುಲಿ ಮೀಸಲು ಪ್ರದೇಶಕ್ಕೆ (ಕೆಟಿಆರ್) 2008 ರಲ್ಲಿ ಅಧಿಸೂಚನೆ ಹೊರಡಿಸಲಾಯಿತು. ಆಗಿನಿಂದ ಕಣ್ಣಿಗೆ ಕಾಣುವಂತಹ ಗಮನಾರ್ಹ ಬೆಳವಣಿಗೆಗಳಾಗಿವೆ. ಮುಂದಿನ ಒಂದು ಅಥವಾ ಎರಡು ದಶಕಗಳಲ್ಲಿ ಕೆಟಿಆರ್ ಹುಲಿ ಹಾಗೂ ಆನೆಗಳಿಗೆ ಅತ್ಯುತ್ತಮ ಅತ್ಯುತ್ತಮ ಆವಾಸಸ್ಥಾನವಾಗಲಿದೆ. ಕಾಳಿ ಕಣಿವೆಯ ಉತ್ತರ ಭಾಗಕ್ಕೆ ಕೆಟಿಆರ್ ಬಂದರೆ ರೈಲ್ವೆ ಯೋಜನೆ ದಕ್ಷಿಣ ಭಾಗಕ್ಕೆ ಇರಲಿದೆ. ಕೊಡಸಲ್ಲಿ / ಕದ್ರಾ ಅಣೆಕಟ್ಟುಗಳು ಮತ್ತು ಕೈಗಾ ಯೋಜನೆಗಳ ನಂತರ ಇಡೀ ಭೂಪ್ರದೇಶದಲ್ಲಿ ಪ್ರತಿಕೂಲ ಬದಲಾವಣೆಗಳಾಗಿವೆ. ಈಗ ರೈಲು ಮಾರ್ಗ ಬಂದರೆ ವಣ್ಯ ಸಂಕುಲ, ಕಣಿವೆ ಕಾಳಿ ನದಿಯ ಜಲಾನಯನ ಪ್ರದೇಶಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಈ ಯೋಜನೆಯನ್ನು ತಿರಸ್ಕರಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. 

ಅಷ್ಟೇ ಅಲ್ಲದೇ ಕೇಂದ್ರ ಹಾಗೂ ರಾಜ್ಯ ಸಂಸ್ಥೆಗಳು ನಡೆಸಿರುವ ಅಧ್ಯಯನದ ಪ್ರಕಾರ ಇದೇ ಪ್ರದೇಶದಲ್ಲಿ ಮೂರು ರೈಲು ಸಂಪರ್ಕವಿದ್ದು, ಹೆದ್ದಾರಿಯೂ ಇರುವುದರಿಂದ ಈ ರೈಲ್ವೆ ಯೋಜನೆಯಿಂದ ಹೆಚ್ಚಿನ ಪ್ರಯೋಜನವಾಗುವುದಿಲ್ಲ ಎಂದು ತಿಳಿದುಬಂದಿದೆ. ವಾಸ್ಕೊ ಲೈನ್ ಕಾರವಾರ ಪೋರ್ಟ್ ನಿಂದ ಕೇವಲ 20 ಕಿ.ಮೀ ದೂರದಲ್ಲಿದೆ. ಆದ್ದರಿಂದ ಈ ಹೊಸ ಮಾರ್ಗದಿಂದ ಹೆಚ್ಚಿನ ಪ್ರಯೋಜನವಾಗುವುದಿಲ್ಲ ಎಂಬುದು ತಜ್ಞರ ಅಭಿಪ್ರಾಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT