ರವಿ ಪೂಜಾರಿ 
ರಾಜ್ಯ

ಸುರೇಶ್ ಪೂಜಾರಿಯೇ ಸೆಲಬ್ರಿಟಿಗಳ ಫೋನ್ ನಂಬರ್ ಕೊಡುತ್ತಿದ್ದ: ರವಿ ಪೂಜಾರಿ

ಸುರೇಶ್ ಪೂಜಾರಿಯೇ ತನಗೆ ಎಲ್ಲಾ ನಟ, ರಾಜಕಾರಣಿ, ಉದ್ಯಮಿಗಳ ಕುರಿತು ಮಾಹಿತಿ ನೀಡುತ್ತಿದ್ದ ಎಂದು ಸಿಸಿಬಿ ವಿಚಾರಣೆ ವೇಳೆ ಭೂಗತ ಪಾತಕಿ ರವಿ ಪೂಜಾರಿ ಬಾಯ್ಬಿಟ್ಟಿದ್ದಾನೆ.

ಬೆಂಗಳೂರು: ಸುರೇಶ್ ಪೂಜಾರಿಯೇ ತನಗೆ ಎಲ್ಲಾ ನಟ, ರಾಜಕಾರಣಿ, ಉದ್ಯಮಿಗಳ ಕುರಿತು ಮಾಹಿತಿ ನೀಡುತ್ತಿದ್ದ ಎಂದು ಸಿಸಿಬಿ ವಿಚಾರಣೆ ವೇಳೆ ಭೂಗತ ಪಾತಕಿ ರವಿ ಪೂಜಾರಿ ಬಾಯ್ಬಿಟ್ಟಿದ್ದಾನೆ.

ಭೂಗತ ಪಾತಕಿ ರವಿ ಪೂಜಾರಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ತನಿಖೆ ವೇಳೆ ಸುರೇಶ್ ಪೂಜಾರಿಯ ಹೆಸರು ಕೇಳಿಬಂದಿದೆ. ಅನೇಕ ಪ್ರಕರಣಗಳಲ್ಲಿ ರವಿ ಪೂಜಾರಿ ಜೊತೆ ಸುರೇಶ್ ಪೂಜಾರಿ ಹೆಸರು ತಳುಕು ಹಾಕಿಕೊಂಡಿದೆ ಎನ್ನಲಾಗಿದೆ.

ಸುರೇಶ್ ಪೂಜಾರಿ, ಫೋನ್ ನಂಬರ್‌ಗಳನ್ನು ಸಂಗ್ರಹಿಸಿ ತನಗೆ ನೀಡುತ್ತಿದ್ದ. ಈ ಸಂದರ್ಭದಲ್ಲಿ ಸುರೇಶ್ ಪೂಜಾರಿ ಬಳಿ ಅವರ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದೆ ಎಂದು ರವಿ ಪೂಜಾರಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ.

ಉದ್ಯಮಿ, ರಾಜಕಾರಣಿ, ನಟರ ಬಗ್ಗೆ ಸುರೇಶ್ ಪೂಜಾರಿ ಮಾಹಿತಿ ನೀಡಿದ ನಂತರ ತಾನು ಕರೆ ಮಾಡಿ‌ ಅವರನ್ನು ಹೆದರಿಸುತ್ತಿದ್ದೆ ಎಂದು ರವಿ ಪೂಜಾರಿ ಬಾಯ್ಬಿಟ್ಟಿದ್ದಾನೆ.

ಸುರೇಶ್ ಪೂಜಾರಿ ಯಾರು..? ಆತನ ಹಿನ್ನೆಲೆ ಏನು..? ಎಂದು ಸದ್ಯ ಆತನ ಮಾಹಿತಿ ಕಲೆಹಾಕಲು ಸಿಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ದೂರದ ದೇಶದಲ್ಲಿ ಕುಳಿತಿದ್ದ ರವಿ ಪೂಜಾರಿಗೆ ಬಲಗೈ ಬಂಟನಾಗಿ ಸುರೇಶ್ ಪೂಜಾರಿ ಕೆಲಸ ಮಾಡ್ತಿದ್ದ ಎನ್ನಲಾಗಿದೆ. 

ಕೆಲವು ಕೇಸ್​ಗಳಲ್ಲಿ ರವಿ ಪೂಜಾರಿಯ ಸಹಚರರು ಬಂಧನವಾದ್ರೂ ಸುರೇಶ್ ಪೂಜಾರಿ ನಾಪತ್ತೆಯಾಗಿದ್ದ. ಖುದ್ದು ರವಿ ಪೂಜಾರಿಯೇ ಪೊಲೀಸರ ಖೆಡ್ಡಕ್ಕೆ ಬಿದ್ದರೂ ಆತನ ಬಲಗೈ ಬಂಟ ಇನ್ನೂ ಪತ್ತೆಯಾಗಿಲ್ಲ. 

ರಕ್ತ ಸಂಬಂಧಿಯಲ್ಲದಿದ್ರೂ ಸುರೇಶ್ ಪೂಜಾರಿ ರವಿ ಪೂಜಾರಿಗೆ ರಾಜ್ಯದ ಪ್ರತಿಯೊಂದು ಮಾಹಿತಿಯನ್ನ ಕೊಡುತ್ತಿದ್ದನಾ? ಎಂಬ ಅನುಮಾನ ಪೊಲೀಸರಲ್ಲಿ ಶುರುವಾಗಿದೆ. ಈತ ಉದ್ಯಮಿಗಳು, ಬಿಲ್ಡರ್​​ಗಳು, ರಾಜಕೀಯ ವ್ಯಕ್ತಿಗಳು, ನಟರ ನಂಬರ್​ಗಳನ್ನು ಸಂಗ್ರಹಿಸಿ ಬಳಿಕ ರವಿ ಪೂಜಾರಿಗೆ ರವಾನೆ ಮಾಡ್ತಿದ್ದನಂತೆ. ಬಳಿಕ ಉದ್ಯಮಿಗಳು, ರಾಜಕೀಯ ವ್ಯಕ್ತಿಗಳಿಗೆ ಕಾಲ್ ಮಾಡಿ ಹಣಕ್ಕೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. 

ಹಲವು  ಪ್ರಕರಣಗಳಲ್ಲಿ ರವಿ ಪೂಜಾರಿ‌ ಜತೆಗೆ  ಸುರೇಶ್ ಪೂಜಾರಿಯ ಹೆಸರು ಸೇರಿಕೊಂಡಿದೆ.  ಹೀಗಾಗಿ ವಿಚಾರಣೆ ವೇಳೆ ಸುರೇಶ್ ಪೂಜಾರಿಯ ಕುರಿತು ಸಿಸಿಬಿ ಪೊಲೀಸರು ರವಿ ಪೂಜಾರಿಯಿಂದ  ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಈಗಾಗಲೇ ರವಿ ಪೂಜಾರಿಯ ಸಹಚರರನ್ನು ಬಂಧಿಸಲಾಗಿದೆ. ಆದರೆ, ಇನ್ನು ಕೂಡ ಸುರೇಶ್ ಪೂಜಾರಿ ತಲೆಮರಿಸಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT