ವಿಧಾನಸೌಧ 
ರಾಜ್ಯ

ಜ್ವರದಿಂದ ಬಳಲುತ್ತಿರುವ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಿ: ಕಂಪನಿಗಳಿಗೆ ಸರ್ಕಾರ ಸಲಹೆ

ಕೊರೋನಾ ಸೋಂಕು ಹರಡುವಿಕೆಯನ್ನು ತಡೆಯಲು ಉದ್ಯೋಗಿಗಳಲ್ಲಿ ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ಅವರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ನಗರದ ಕಂಪನಿಗಳಿಗೆ ರಾಜ್ಯ ಸರ್ಕಾರ ಸಲಹೆ ನೀಡಿದೆ.

ಬೆಂಗಳೂರು: ಕೊರೋನಾ ಸೋಂಕು ಹರಡುವಿಕೆಯನ್ನು ತಡೆಯಲು ಉದ್ಯೋಗಿಗಳಲ್ಲಿ ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ಅವರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ನಗರದ ಕಂಪನಿಗಳಿಗೆ ರಾಜ್ಯ ಸರ್ಕಾರ ಸಲಹೆ ನೀಡಿದೆ.

ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಸಲಹಾ ಸೂಚನೆ ಬಿಡುಗಡೆಗೊಳಿಸಿದ್ದು, ಜ್ವರ, ನೆಗಡಿಯಂತಹ ಲಕ್ಷಣಗಳಿರುವ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಬೇಕು. ಜೊತೆಗೆ, ಕೈಯ ಸ್ವಚ್ಛತೆ ಮತ್ತು ಕೆಮ್ಮಿನ ತಡೆ ಕುರಿತು ನಿರ್ದೇಶನ ನೀಡಬೇಕು ಎಂದು ಸೂಚನೆ ನೀಡಿದೆ.

ಜೊತೆಗೆ, ಸೋಂಕು ಪೀಡಿತ ಚೀನಾ, ಇರಾನ್, ರಿಪಬ್ಲಿಕ್ ಆಫ್ ಕೊರಿಯಾ, ಇಟಲಿ ಮತ್ತು ಜಪಾನ್ ದೇಶಗಳಿಗೆ ಅನವಶ್ಯಕ ಪ್ರಯಾಣ ಬೆಳಸದಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ.

"ಚೀನಾ, ದಕ್ಷಿಣ ಕೊರಿಯಾ, ಜಪಾನ್, ಇರಾನ್, ಇಟಲಿ, ಹಾಂಗ್ ಕಾಂಗ್, ಮಲೇಷ್ಯಾ, ಇಂಡೋನೇಷ್ಯಾ, ನೇಪಾಳ, ಥೈಲ್ಯಾಂಡ್, ಸಿಂಗಾಪುರ್ ಹಾಗೂ ತೈವಾನ್ ನಿಂದ ನೇರವಾಗಿ ಅಥವಾ ಪರೋಕ್ಷವಾಗಿ ಆಗಮಿಸುವ ನೌಕರರು ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು ಎಂದು ಸಹ ಸೂಚಿಸಲಾಗಿದೆ.

ಇನ್ನು ಕೊರೋನಾವೈರಸ್ ಪಸರಿಸುವ ಭೀತಿ ಹಿನ್ನೆಲೆಯಲ್ಲಿ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರ ವೈದ್ಯಕೀಯ ಪರೀಕ್ಷೆ ಕಡ್ಡಾಯ ಎಂಬ ಕೇಂದ್ರ ಸರ್ಕಾರದ ಸೂಚನೆಯಂತೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಗುರುವಾರ 2,076 ಪ್ರಯಾಣಿಕರನ್ನು ಕೊರೋನಾ ವೈರಸ್ ಸೋಂಕಿನ ಪ್ರಾಥಮಿಕ ಪರೀಕ್ಷೆಗೆ ಗುರಿಪಡಿಸಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ 42,283 ಜನರನ್ನು ಪರೀಕ್ಷಿಸಲಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 21ರಿಂದ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಎರಡು ದಿನಗಳ ಹಿಂದೆ ದುಬೈನಿಂದ ಬಂದಿಳಿದ ಟೆಕ್ಕಿಯೊಬ್ಬರಲ್ಲಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

Ranji Trophy: ಒಂದೂ ರನ್ ನೀಡದೇ 5 ವಿಕೆಟ್.. Amit Shukla ಐತಿಹಾಸಿಕ ದಾಖಲೆ, IPL 2026 ಹರಾಜಿಗೆ ಭರ್ಜರಿ ಸಿದ್ಧತೆ!

ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಸುರೇಶ್ ಕುಮಾರ್; ಅನುಭವ ಹಂಚಿಕೊಂಡ ಬಿಜೆಪಿ ಶಾಸಕ

ಅಂಕೋಲಾ ಬಳಿ ಟ್ಯಾಂಕರ್‌ ಪಲ್ಟಿ; ಮೀಥೇನ್ ಅನಿಲ ಸೋರಿಕೆ, ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ!

SCROLL FOR NEXT