ನಿಶ್ಚಿತಾರ್ಥಕ್ಕೆ ಸಿಎಂ ಬಂದಿದ್ದ ಸಂದರ್ಭ 
ರಾಜ್ಯ

ಸಚಿವ ಶ್ರೀರಾಮುಲು ಪುತ್ರಿ ವಿವಾಹ: ವಧು-ವರರಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ 

ಆರೋಗ್ಯ ಸಚಿವ ಬಿ ಶ್ರೀರಾಮುಲು ಪುತ್ರಿ ರಕ್ಷಿತಾ ವಿವಾಹ ನಗರದ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರುತ್ತಿದ್ದು, ಇಂದು ಬೆಳಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅಲ್ಲಿಗೆ ತೆರಳಿ ವಧು-ವರರಿಗೆ ಶುಭ ಹಾರೈಸಿ ಬಂದಿದ್ದಾರೆ.

ಬೆಂಗಳೂರು: ಆರೋಗ್ಯ ಸಚಿವ ಬಿ ಶ್ರೀರಾಮುಲು ಪುತ್ರಿ ರಕ್ಷಿತಾ ವಿವಾಹ ನಗರದ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರುತ್ತಿದ್ದು, ಇಂದು ಬೆಳಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅಲ್ಲಿಗೆ ತೆರಳಿ ವಧು-ವರರಿಗೆ ಶುಭ ಹಾರೈಸಿ ಬಂದಿದ್ದಾರೆ.

ಇಂದು ಬೆಳಗ್ಗೆ 9.30ರ ಹೊತ್ತಿಗೆ ವಿವಾಹ ನಡೆಯುತ್ತಿರುವ ಕಲ್ಯಾಣ ಮಂಟಪ ಬಳಿ ಆಗಮಿಸಿದ ಸಿಎಂ ಯಡಿಯೂರಪ್ಪ ವಧು ವರರಿಗೆ ಶುಭ ಹಾರೈಸಿ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕೂಡಲೇ ವಿಧಾನಸೌಧದತ್ತ ತೆರಳಿದರು.ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರು ಕೂಡ ಇಂದು ವಿವಾಹ ಸಮಾರಂಭಕ್ಕೆ ಹಾಜರಾಗುವ ನಿರೀಕ್ಷೆಯಿದೆ. 


ನಗರದ ಅರಮನೆ ಮೈದಾನದಲ್ಲಿ(ವಸಂತ ಗೇಟ್) ನಡೆಯುವ ವಿವಾಹಕ್ಕೆ ರಾಜ್ಯ, ಹೊರರಾಜ್ಯ ಸೇರಿದಂತೆ ಹಲವು ಕಡೆಗಳಿಂದ ಬಂಧುಗಳು, ಹಿತೈಷಿಗಳು, ಗಣ್ಯರು, ಸಿನಿಮಾ, ಉದ್ಯಮ ಕ್ಷೇತ್ರಗಳ ಪ್ರಮುಖರು, ಸ್ನೇಹಿತರು ಆಗಮಿಸಿ ಶುಭ ಹಾರೈಸಲಿದ್ದಾರೆ. 

ಶ್ರೀರಾಮುಲು ಪುತ್ರಿ ರಕ್ಷಿತಾ ಹೈದರಾಬಾದ್ ಮೂಲದ ರವಿಕುಮಾರ್ ಪುತ್ರ ಲಲಿತ್ ಸಂಜೀವ್ ರೆಡ್ಡಿಯವರ ಬಾಳಸಂಗಾತಿಯಾಗುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT