ಬಸವನಪುರದ ಮಂಜುಳಾ 
ರಾಜ್ಯ

ಬೆಂಗಳೂರು: ಚೀಟಿ ವ್ಯವಹಾರದ ಹೆಸರಿನಲ್ಲಿ 8 ಕೋಟಿ ರೂ ವಂಚಿಸಿ ಮಹಿಳೆ ಪರಾರಿ

ಚೀಟಿ ವ್ಯವಹಾರ ನಡೆಸುತ್ತಿದ್ದ ಮಹಿಳೆಯೊಬ್ಬಳು 8 ಕೋಟಿ ರೂ ವಂಚಿಸಿ ಪರಾರಿಯಾಗಿರುವ ಘಟನೆ ಬಸವನಪುರದಲ್ಲಿ ನಡೆದಿದೆ.

ಬೆಂಗಳೂರು: ಚೀಟಿ ವ್ಯವಹಾರ ನಡೆಸುತ್ತಿದ್ದ ಮಹಿಳೆಯೊಬ್ಬಳು 8 ಕೋಟಿ ರೂ ವಂಚಿಸಿ ಪರಾರಿಯಾಗಿರುವ ಘಟನೆ ಬಸವನಪುರದಲ್ಲಿ ನಡೆದಿದೆ.

ಹಲವು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದ ಬಸವನಪುರದ ಮಂಜುಳಾ ಎಂಬ ಮಹಿಳೆ, ಸುಮಾರು ನೂರಕ್ಕೂ ಹೆಚ್ಚು ಜನರ ಬಳಿ 8 ಕೋಟಿ ರೂಕ್ಕಿಂತ ಅಧಿಕ ಹಣ ಚೀಟಿ ಕಟ್ಟಿಸಿಕೊಂಡು ಪರಾರಿಯಾಗಿದ್ದಾಳೆ.

ಮಂಜುಳಾ, ಮೊದಲು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಬಳಿಕ ಚೀಟಿ ವ್ಯವಹಾರ ಆರಂಭಿಸಿ ಮೊದಲು ಗಾರ್ಮೆಂಟ್ಸ್ ನಲ್ಲಿ ಪರಿಚಯವಿದ್ದ ಮಹಿಳೆಯರಿಂದ ಚೀಟಿ ಹಾಕಿಸಿಕೊಂಡಿದ್ದಳು.

ಮೊದ  ಮೊದಲು ಚೀಟಿ ಹಣವನ್ನು ಕಾಲ ಕಾಲಕ್ಕೆ ನೀಡುವ ಮೂಲಕ ಜನರ ವಿಶ್ವಾಸವನ್ನು  ಗಳಿಸಿಕೊಂಡಿದ್ದಳು. ಹೀಗಾಗಿ ಹೆಚ್ಚಾಗಿ ಗಾರ್ಮೆಂಟ್ಸ್ ನೌಕರರು, ಆಟೋ ಡ್ರೈವರ್,  ದಿನಗೂಲಿ ನೌಕರರು ಚೀಟಿ ಹಾಕಿದ್ದರು ಎಂದು ತಿಳಿದು ಬಂದಿದೆ.

ಮಂಜುಳಾ  ತಾನು ಖರೀದಿಸಿದ್ದ ಮನೆಯನ್ನೂ ಮಾರಿಕೊಂಡು  ಪರಾರಿಯಾಗಿದ್ದಾಳೆ. ಈ ಹಿನ್ನಲೆಯಲ್ಲಿ  ವಂಚನೆಗೊಳಗಾದವರು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮಂಜುಳಾ ವಿರುದ್ಧ ದೂರು  ದಾಖಲಿಸಿಕೊಂಡು.

ಸದ್ಯ ಪೊಲೀಸರು ಮಂಜುಳಾ ಪತ್ತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT