ಗ್ರಾಮಸ್ಥರು 
ರಾಜ್ಯ

ಬಳ್ಳಾರಿ: ಪ್ರಧಾನಿ ಮೋದಿ ಫೋಟೋ ಬಳಸಿ ಕೀಳುಮಟ್ಟದ ಪೋಸ್ಟ್, ಆರೋಪಿಗೆ ಕಪಾಳಮೋಕ್ಷ, ಥಳಿತ

ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಕೀಳುಮಟ್ಟದಲ್ಲಿ ಬಳಕ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಹಿಡಿದು ಸ್ಥಳೀಯರೇ ಥಳಿಸಿದ್ದಾರೆ.

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಕೀಳುಮಟ್ಟದಲ್ಲಿ ಬಳಕ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಹಿಡಿದು ಸ್ಥಳೀಯರೇ ಥಳಿಸಿದ್ದಾರೆ. 

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ನಿವಾಸಿ ನಭೀ ರಸೂಲ್ ಎಂಬಾತ ಥಳಿತಕ್ಕೊಳಗಾದ ವ್ಯಕ್ತಿ.

ಪ್ರದಾನಿ ನರೇಂದ್ರ ಮೋದಿಯವರ ಕೊರಳ ಪಟ್ಟಿ ಹಿಡಿದ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಎಳೆದೊಯ್ಯುವ ದೃಶ್ಯವನ್ನು ಸೃಷ್ಠಿಸಿ ಹರಿಬಿಟ್ಟಿದ್ದ ಕಿಡಿಗೇಡಿ ರಸೂಲ್. ಅದರ ಜೊತೆ ಇನ್ನೂ ಕೆಲವು ಆಕ್ಷೇಪಾರ್ಹ ಫೋಟೊಗಳನ್ನು ರಸೂಲ್ ಹರಿಬಿಟ್ಟಿದ್ದ.

ಇದನ್ನು ಗಮನಿಸಿದ ಶ್ರೀ ರಾಮಸೇನೆಯ ಕಾರ್ಯಕರ್ತರು ಗ್ರಾಮಕ್ಕೆ ಭೇಟಿ ನೀಡಿ ನಭೀ ರಸೂಲ್ ನನ್ನು ಹಿಡಿದು ಭಾರತ್ ಮಾತಾಕಿ ಜೈ ಹೇಳಿಸಿ ಕ್ಷಮೆ ಕೇಳಿಸಿದ್ದಾರೆ. 

ಆಗಿರುವ ಅಪಚಾರಕ್ಕೆ ಗ್ರಾಮದ ಹಿರಿಯರ ಮುಂದೆ ನಭಿಯಿಂದ ಕ್ಷಮೆ ಕೇಳಿಸಿ ಶ್ರೀರಾಮಸೇನೆ ಕಾರ್ಯಕರ್ತರು ತೆರಳಿದರು. ಸ್ಥಳದಲ್ಲೇ ಇದ್ದ ನಭಿ ಸಹೋದರ ಸ್ವತಃ ನಭಿಗೆ ಕಪಾಳ ಮೋಕ್ಷ ಮಾಡಿ ಶ್ರೀರಾಮ ಸೇನೆ ಕಾರ್ಯಕರ್ತರನ್ನ ಕ್ಷಮೆ ಕೇಳಿ ಮರಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT