ಕೊಲೆಯಾದ ಬಿಜೆಪಿ ನಾಯಕ ಎಸ್. ಆನಂದ್ 
ರಾಜ್ಯ

ಮೈಸೂರು: ಬರ್ತಡೇ ಪಾರ್ಟಿ ವೇಳೆ ಬಿಯರ್ ಬಾಟಲಿಯಿಂದ ಚುಚ್ಚಿ ಬಿಜೆಪಿ ನಾಯಕನ ಭೀಕರ ಹತ್ಯೆ!

ಬರ್ತಡೇ ಪಾರ್ಟಿಯಲ್ಲೇ ಬಿಯರ್ ಬಾಟಲಿಯಿಂದ ಚುಚ್ಚಿ ಬಿಜೆಪಿ ನಾಯಕನೊಬ್ಬನ ಭೀಕರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 

ಮೈಸೂರು: ಬರ್ತಡೇ ಪಾರ್ಟಿಯಲ್ಲೇ ಬಿಯರ್ ಬಾಟಲಿಯಿಂದ ಚುಚ್ಚಿ ಬಿಜೆಪಿ ನಾಯಕನೊಬ್ಬನ ಭೀಕರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಕುವೆಂಪುನಗರದ ಅಪಾರ್ಟ್​​ಮೆಂಟ್​​ವೊಂದರಲ್ಲಿ ದುಷ್ಕರ್ಮಿಗಳು ಬಿಜೆಪಿ ನಾಯಕ ಎಸ್​. ಆನಂದ್​ ಅವರನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷರಾಗಿದ್ದ ಆನಂದ್ ಗುರುವಾರ ತಮ್ಮ ಬರ್ತಡೇ ಆಚರಣೆಯಲ್ಲಿದ್ದರು. ಕುವೆಂಪುನಗರ ಲವಕುಶ ಪಾರ್ಕ್ ಸಮೀಪದ ಅಪಾರ್ಟ್‍ಮೆಂಟ್‍ನಲ್ಲಿ ಪಾರ್ಟಿ ನಡೆಯುತ್ತಿದ್ದಾಗಲೇ ಕೊಲೆ ನಡೆದಿದೆ.

ಇನ್ನು ಕೊಲೆಯಾಗಿರುವ ಆನಂದ್ ಓರ್ವ ರೌಡಿ ಶೀಟರ್ ಸಹ ಆಗಿದ್ದು ಹಿಂದೆ ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದರು.ಅಲ್ಲದೆ 13ವರ್ಷಗಳಷ್ಟು ಹಿಂದೆ 1ಜನತಾನಗರದ ಮಾರುತಿ ಟೆಂಟ್ ರಸ್ತೆಯಲ್ಲಿ ಕುಮಾರಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಈತ ಆರೋಪಿಯಾಗಿ ಜೈಲು ಸೇರಿದ್ದರು.

ಇನ್ನು ಈ ಹಳೇ ದ್ವೇಷದಿಂದಾಗಿಯೇ ಕೊಲೆ ನಡೆದಿರಬೇಕೆಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ಘಟನೆ ನಂತರ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಕುವೆಂಪುನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯೋಗೇಶ್ ಗೌಡ ಹತ್ಯೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಇದು ಮಹಿಳಾ ಮೀಸಲಾತಿ ಮಸೂದೆ ಅಲ್ಲ, ಸಂವಿಧಾನದ ಮೇಲೆ ಮನುವಾದ ಹೇರುವ ಮಸೂದೆ: ರಾಹುಲ್ ಗಾಂಧಿ

Delimitation Bill 2026: 'ಮೋದಿ ಜಾದೂಗಾರ' ಎಂದ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ರಾಜನಾಥ್ ಸಿಂಗ್ ಆಗ್ರಹ!

TCS 'ಲವ್ ಜಿಹಾದ್' ಪ್ರಕರಣದ ಸಂಪೂರ್ಣ ಮಾಡ್ಯೂಲ್ ಅನ್ನೇ ಭೇದಿಸುತ್ತೇವೆ: ಮಹಾ ಸಿಎಂ ಫಡ್ನವೀಸ್

ಹಾರ್ಮುಜ್‌ ತೆರವುಗೊಳಿಸುವ ಸಾಮರ್ಥ್ಯ ಯುರೋಪಿಯನ್ ರಾಷ್ಟ್ರಗಳಿಗೆ ಇದೆ: ಫ್ರಾನ್ಸ್

SCROLL FOR NEXT